ಮೈಸೂರು
ಚುನಾವಣಾ ವೆಚ್ಚದ ಮೇಲೆ ಕಣ್ಗಾವಲು ತಂಡ ತೀವ್ರ ನಿಗಾ
ಮೈಸೂರು, ಮಾ. 15(ಆರ್ಕೆ)- ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ವೆಚ್ಚದ ಮೇಲೆ ತೀವ್ರ ನಿಗಾ ಇಡಲು ಸ್ಥಿರ ಕಣ್ಗಾವಲು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಸಭಾಂಗಣದಲ್ಲಿ ಇಂದು ಚುನಾವಣೆ ಸಿದ್ಧತೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಿ ಸೆಕ್ಟರ್ ಅಧಿಕಾರಿ ಗಳು, ಪೊಲೀಸ್, ಅರಣ್ಯ, ಕಂದಾಯ, ಜಿಎಸ್ಟಿ, ವಾಣಿಜ್ಯ ತೆರಿಗೆ, ಅಬಕಾರಿ, ಆದಾಯ ತೆರಿಗೆ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. ಚುನಾವಣಾ ಅಕ್ರಮ ತಡೆಗಟ್ಟಲು ಸ್ಥಿರ...