ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ

April 19, 2018

ಮಡಿಕೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋ ತ್ಸವ ಕಾರ್ಯಕ್ರಮವು ಬುಧವಾರ ಜರುಗಿತು.     

ನಗರದ ಕೋಟೆ ಹಳೇ ವಿಧಾನಸಭಾ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಪಿ..ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚು ವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಡಿವೈಎಸ್ಪಿ ಸುಂದರರಾಜ್ ಹಾಗೂ ಇತರರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.      

ಕಾರ್ಯಕ್ರಮದಲ್ಲಿ ಮಾತನಾಡಿದ ಶಂಕ ರಯ್ಯ ಅವರು, ಕಾಯಕವೇ ಕೈಲಾಸ ಎಂಬ ಸಿದ್ಧಾಂತದಡಿ ಸಾಮಾಜಿಕ ನ್ಯಾಯದ ಪರಿಕ ಲ್ಪನೆ,  ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ ಹಾಗೂ ಸಮಾಜ ಸುಧಾ ರಕ ಬಸವಣ್ಣ ಎಂದು ಅವರು ಹೇಳಿದರು.  

ಜಗಜ್ಯೋತಿ ಬಸವೇಶ್ವರರ ವಚನಗಳು ಸಾರ್ವ ಕಾಲಿಕವಾಗಿದ್ದು, ಕನ್ನಡ ಭಾಷೆಯಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿ ದ್ದಾರೆ ಎಂದು ಶಂಕರಯ್ಯ ಅವರು ನುಡಿದರು.       

ಸಮಾಜದಲ್ಲಿ ಪರಿವರ್ತನೆ ಆಗಬೇಕು, ಹಾಗಾ ದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂಬು ದನ್ನು ಬಸವಣ್ಣ ಮನಗಂಡಿದ್ದರು. 12ನೇ ಶತ ಮಾನದಲ್ಲಿ ಅನುಭವ ಮಂಟಪದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ, ಜಗತ್ತಿನ ಎಲ್ಲರೂ ಸರಿ ಸಮಾನರು ಎಂಬುದನ್ನು ಸಾರಿದ್ದರು ಎಂದು ಅವರು ನುಡಿದರು.   

ಹಸಿದವರಿಗೆ ಅನ್ನ, ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡುವ ಮೂಲಕ ಸಮಾಜವನ್ನು ಬೆಳಕಿನತ್ತ ಕೊಂಡೊಯ್ಯಲು ಶ್ರಮಿಸಿದರು. ಹಾಗೆಯೇ ಸಮಾ ಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣ ಮಾಡಲು ಪ್ರಯತ್ನ ಪಟ್ಟ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಅವರು ವರ್ಣಿಸಿದರು.

ದೇಹವೇ ದೇಗುಲ, ಕಾಯಕವೇ ಕೈಲಾಸ ಎಂಬುದನ್ನು ಪ್ರತಿಪಾದಿಸಿದ್ದ ಬಸವೇಶ್ವರರು, ಸಮಾಜದಲ್ಲಿನ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಪ್ರಯತ್ನಿಸಿದರು ಎಂದು ಶಂಕರಯ್ಯ ಅವರು ತಿಳಿಸಿದರು. ಪ್ರತಿಯೊಬ್ಬರ ಜೀವನದ ಅರ್ಥಪೂರ್ಣ ಬದುಕಿಗೆ ಬಸವೇಶ್ವರರ ವಚನ ಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು. ಸ್ತ್ರೀಯರಿಗೆ ಸಮಾನತೆ ಸೇರಿದಂತೆ ಹಲವು ಸಾಮಾಜಿಕ ಸುಧಾರಣೆಯನ್ನು 12ನೇ ಶತ ಮಾನದಲ್ಲಿ ಅನುಭವ ಮಂಟಪದ ಮೂಲಕ ಜಾರಿಗೊಳಿಸಿದ ಕೀರ್ತಿ ಬಸವಣ್ಣರಿಗೆ ಸಲ್ಲುತ್ತದೆ ಎಂದು ಶಂಕರಯ್ಯ ಅವರು ನುಡಿದರು.

ಪ್ರೊಭೆಷನರಿ ಎಸ್.ಪಿ.ಯತೀಶ್ ಕುಮಾರ್, ಜಿಲ್ಲಾ ಖಜಾನಾಧಿಕಾರಿ ಸತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇ ಶಕರಾದ ಮಲ್ಲೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ತಾಪಂ ಇಒ ಲಕ್ಷ್ಮಿ, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಸಾವಿತ್ರಿ ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.  

 

Translate »