ಯತ್ನಾಳ್ ಆರೋಪ ನಿರಾಧಾರ, ಬಿಎಸ್‍ವೈಗೆ ಕ್ಲೀನ್ ಚಿಟ್ ನೀಡಿದ ಅರುಣ್‍ಸಿಂಗ್
ಮೈಸೂರು

ಯತ್ನಾಳ್ ಆರೋಪ ನಿರಾಧಾರ, ಬಿಎಸ್‍ವೈಗೆ ಕ್ಲೀನ್ ಚಿಟ್ ನೀಡಿದ ಅರುಣ್‍ಸಿಂಗ್

February 19, 2021

ಬೆಂಗಳೂರು, ಫೆ.18- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಮಾಡಿರುವ ಟೀಕೆಗಳು ಆಧಾರ ರಹಿತ. ಇವುಗಳನ್ನು ತಿರಸ್ಕರಿ ಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿ ದ್ದಾರೆ. ಯತ್ನಾಳ್ ಪಕ್ಷದ ಶಿಸ್ತು ಉಲ್ಲಂಘಿಸಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಇದನ್ನು ಪರಿಶೀಲಿಸುತ್ತಿದೆ ಎಂದಿದ್ದಾರೆ.

ನಗರದ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ತಿರಸ್ಕರಿತ್ತೇವೆ. ಅವರು ಏನೇ ಮಾತಾಡಿದರೂ ಅದು ತಪ್ಪು. ಅವರನ್ನು ಬಹಳ ವರ್ಷಗಳಿಂದ ಎಲ್ಲರೂ ನೋಡಿದ್ದಾರೆ. ಅವರು ಸುಳ್ಳು ಹೇಳಿಕೆಗಳನ್ನು ಮಾಧ್ಯಮಗಳ ಮುಂದೆ ಕೊಡುತ್ತಿದ್ದಾರೆ ಎಂದು ಗಂಭೀರ ವಾಗಿ ಆರೋಪಿಸಿದರು. ಯತ್ನಾಳ್ ಬಗ್ಗೆ ಪಕ್ಷದ ರಾಷ್ಟ್ರೀಯ ಶಿಸ್ತು ಸಮಿತಿ ಪರಿಶೀಲಿಸುತ್ತದೆ. ವಿಜಯೇಂದ್ರ ನಮ್ಮ ಪಕ್ಷದ ರಾಜ್ಯ ಉಪಾಧ್ಯಕ್ಷ. ಯತ್ನಾಳ್ ಹೇಳಿಕೆ ಸರಿಯಲ್ಲ. ಒಬ್ಬ ಎಂಎಲ್‍ಎ ಹೇಳಿಕೆಗೆ ಏಕೆ ಇಷ್ಟು ಪ್ರಾಮುಖ್ಯತೆ ಕೊಡಬೇಕೆ? ಪದೇ ಪದೇ ಯತ್ನಾಳ್ ಬಗ್ಗೆ ಪ್ರಶ್ನೆ ಕೇಳುತ್ತೀರಾ ಎಂದು ಮಾಧ್ಯಮದವರನ್ನೇ ಅರುಣ್ ಸಿಂಗ್ ಪ್ರಶ್ನಿಸಿದರು.

ಯತ್ನಾಳ್ ಹೇಳಿಕೆ ನಮ್ಮ ಪಕ್ಷಕ್ಕೆ ಪ್ರಸ್ತುತ ಅಲ್ಲ. ಯತ್ನಾಳ್ ಹೇಳಿಕೆಯನ್ನು ನಂಬಬೇಡಿ ಎನ್ನುವ ಮೂಲಕ ಯಡಿಯೂರಪ್ಪ ಬೆಂಬಲಕ್ಕೆ ನಿಂತ ಅರುಣ್ ಸಿಂಗ್, ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದವು. ಅವನ್ನು ತಳ್ಳಿಹಾಕುವುದು ಸೂಕ್ತ. ಇಂತಹ ಗಂಭೀರ ಆರೋಪ ಮಾಡಿರುವ ಕಾರಣದಿಂದಲೇ ಈಗಾಗಲೇ ಅವರಿಗೆ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸೂಕ್ತ ಸಮಯದಲ್ಲಿ ಶಿಸ್ತು ಸಮಿತಿ ಕ್ರಮಕೈಗೊಳ್ಳುತ್ತದೆ ಎಂದರು. ವಿಜಯೇಂದ್ರ ನಮ್ಮ ಪಕ್ಷದ ಉಪಾಧ್ಯಕ್ಷ. ಸಹಜವಾಗಿಯೇ ನಾವು ಉಪಾಧ್ಯಕ್ಷನನ್ನೇ ಬೆಂಬಲಿಸುತ್ತೇವೆ. ಇಡೀ ರಾಷ್ಟ್ರದ ಜನರನ್ನು ಸಮಾನವಾಗಿ ಕಾಣುತ್ತೇವೆ. ಎಲ್ಲ ಸಮಾಜದ ಬಡವರ ಕಲ್ಯಾಣವೇ ಮೋದಿ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

 

Translate »