ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ‘ಸುಪ್ರೀಂ’ ಅಸ್ತು
News

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ‘ಸುಪ್ರೀಂ’ ಅಸ್ತು

November 8, 2022

ದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂ ನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರ ಗಳನ್ನು ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಪರಿಶೀಲಿಸಿತು. ಐವರು ನ್ಯಾಯ ಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿ ಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು. ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯ ಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮ ಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗು ತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂ ಧಿಸಿದ ವಿಚಾರದಲ್ಲಿ ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ? ಎಂಬ ಅಂಶ ಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದು ಳಿದವರಿಗೆ ಶೇ.10ರ ಮೀಸಲಾತಿ ನೀಡಲು ಅನುವು ಮಾಡಿ ಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್‍ಸಿ), ಪರಿಶಿಷ್ಟ ವರ್ಗ (ಎಸ್‍ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ. ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂ ಧಿಸಿದಂತೆ ಸುಪ್ರೀಂಕೋರ್ಟ್ ಪರಿಗಣಿಸಿದ ಮತ್ತೊಂದು ಅಂಶ ಶೇ.50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣ ದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ.50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯ ಮೂರ್ತಿ ಯು.ಯು. ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನವೆಂಬರ್ 8) ನಿವೃತ್ತರಾಗಲಿದ್ದಾರೆ.

ಖರ್ಗೆ ಸ್ವಾಗತ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಈ ವಿಚಾರವಾಗಿ ಬೆಂಗ ಳೂರಿನಲ್ಲಿ ಮಾತನಾಡಿ, ಮೀಸಲಾತಿಗೆ ಸಂಸತ್‍ನಲ್ಲಿ ನಾವೆಲ್ಲಾ ಒಮ್ಮತದಿಂದ ಒಪ್ಪಿಗೆ ನೀಡಿದ್ದೆವು. ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ, ಅದನ್ನು ಸ್ವಾಗತಿಸುತ್ತೇವೆ ಎಂದರು.

Translate »