ಬೆಂಗಳೂರು,ನ.3-ರಾಜ್ಯದಲ್ಲಿರುವ 80,000 ಮಂದಿ ಪೆÇಲೀಸರಲ್ಲಿ ಶೇ.11ರಷ್ಟು ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಇದರಲ್ಲಿ 87 ಮಂದಿ ಪೆÇಲೀ ಸರನ್ನು ಮಹಾಮಾರಿ ವೈರಸ್ ಬಲಿಪಡೆದು ಕೊಂಡಿದೆ ಎಂದು ತಿಳಿದುಬಂದಿದೆ.
ನವೆಂಬರ್ 2ರವರೆಗೂ 9,348 ಮಂದಿ ಪೆÇಲೀಸರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ ಈಗಾಗಲೇ 8,052 ಮಂದಿ ಸೋಂಕಿ ನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಬಿಡು ಗಡೆಗೊಂಡಿದ್ದಾರೆ. ಬೆಂಗಳೂರು ನಗರದಲ್ಲಿ ಈವರೆಗೆ 2,904 ಮಂದಿ ಪೆÇಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಇದರಲ್ಲಿ ಈವರೆಗೂ 2,432 ಮಂದಿ ಚೇತರಿಸಿಕೊಂಡಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, 31 ಸಿಬ್ಬಂದಿ ಕೋವಿಡ್ -19ಕ್ಕೆ ಬಲಿಯಾಗಿದ್ದಾರೆ.
ಈ ನಡುವೆ ಕೊರೊನಾ ಕರ್ತವ್ಯದ ವೇಳೆ ಸೋಂಕು ತಗುಲಿ ಮೃತಪಟ್ಟಿರುವ 84 ಮಂದಿ ಪೆÇಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರ ರೂ.30 ಲಕ್ಷ ಪರಿಹಾರ ನೀಡಲಾಗಿದೆ. ಇನ್ನೂ ಮೂವರು ಪೆÇಲೀಸರು ಇತ್ತೀಚೆಗಷ್ಟೇ ಸಾವನ್ನಪ್ಪಿದ್ದು, ಮೃತ ಪೆÇಲೀಸರ ಕುಟುಂಬಸ್ಥರಿಗೂ ಶೀಘ್ರದಲ್ಲೇ ಪರಿಹಾರ ನೀಡಲಾಗುತ್ತದೆ. ಇದಲ್ಲದೆ, ಮೃತ ಪೆÇಲೀಸರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ವನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪೆÇಲೀಸರಿಗೂ ಸೋಂಕು ತಗುಲುವ ಸಂಖ್ಯೆ ಕಡಿಮೆ ಯಾಗುತ್ತಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಪ್ರತಿನಿತ್ಯ 20-30 ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದರೀಗ ಈ ಸಂಖ್ಯೆ ಒಂದಂಕಿಗೆ ಬಂದು ನಿಂತಿದೆ. ಇದು ಆರೋಗ್ಯಕರ ಬೆಳವಣಿಗೆಯಾಗಿದೆ. ಕೊರೊನಾಗೆ ಪೆÇಲೀಸರನ್ನು ಬಲಿಯಾಗಲು ಬಿಡುವುದಿಲ್ಲ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದು ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.