ಶ್ರೀರಂಗಪಟ್ಟಣ ಪ್ರವಾಸಿತಾಣ ಅಭಿವೃದ್ಧಿಗೆ 20 ಕೋಟಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮಂಡ್ಯ

ಶ್ರೀರಂಗಪಟ್ಟಣ ಪ್ರವಾಸಿತಾಣ ಅಭಿವೃದ್ಧಿಗೆ 20 ಕೋಟಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

December 26, 2018

ಮಂಡ್ಯ: ಶ್ರೀರಂಗಪಟ್ಟಣ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 20 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದ್ದು, ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ತಿಳಿಸಿದರು.
ಮಂಗಳವಾರ ಶ್ರೀರಂಗಪಟ್ಟಣದ ಮಯೂರ ರಿವರ್ ವ್ಯೂ ಹೋಟೆಲ್‍ನಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಹಾಗೂ ಶಾಸಕರ ರವೀಂದ್ರ ಶ್ರೀಕಂಠಯ್ಯ ಅವರ ಮನವಿ ಮೇರೆಗೆ ಶ್ರೀರಂಗಪಟ್ಟಣ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಸರ್ಕಾರ 20 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು.

ಶ್ರೀರಂಗಪಟ್ಟಣದ ಕೋಟೆಗಳ ಸುತ್ತಲಿ ರುವ ಕಂದಕಗಳ ನವೀಕರಣ ಮಾಡಿ ನಂತರ ಅಲ್ಲಿ ನೀರನ್ನು ತುಂಬಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಆಕರ್ಷಕ ವಿದ್ಯುತ್ ದೀಪಗಳ ಅಳವಡಿಕೆ ಹಾಗೂ ಉದ್ಯಾ ನವನ ನಿರ್ಮಾಣ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ನಿಮಿಷಾಂಬ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ 50 ಲಕ್ಷ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸಮರ್ಪಕ ವಾಹನದ ಪಾರ್ಕಿಂಗ್ ವ್ಯವಸ್ಥೆ, ಮೂಲಭೂತ ವ್ಯವಸ್ಥೆ ಹಾಗೂ ಇತರೆ ಸ್ಮಾರಕಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಶ್ರೀರಂಗಪಟ್ಟಣ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಒಂದು ಹಂತದ ನೀಲಿ ನಕ್ಷೆ ತಯಾರಾಗಿದ್ದು, ನಂತರದ ದಿನ ಗಳಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಹೆಚ್ಚುವರಿಯಾಗಿ ಅನುದಾನ ಬೇಕಾದಲ್ಲಿ ಅನುದಾನ ನೀಡಲು ಅಗತ್ಯ ಕ್ರಮವಹಿ ಸಲಾಗುವುದು ಎಂದರು.

ಇದೇ ವೇಳೆ ಶ್ರೀರಂಗಪಟ್ಟಣದಲ್ಲಿರುವ ಕೋಟೆ ಹಾಗೂ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆವರಣಕ್ಕೆ ಸಚಿವ ಸಾರಾ ಮಹೇಶ್ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ರವೀಂದ್ರ ಶ್ರೀಕಂಠಯ್ಯ, ಪ್ರವಾಸೋ ದ್ಯಮ ಇಲಾಖೆ ನಿರ್ದೇಶಕರಾದ ರಾಮು, ಪಾಂಡವಪುರ ಎಸಿ ಶೈಲಜಾ, ಶ್ರೀರಂಗ ಪಟ್ಟಣ ತಹಶೀಲ್ದಾರ್ ನಾಗೇಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Translate »