ಮತಗಟ್ಟೆ ಅಧಿಕಾರಿಗಳಿಗೆ 2ನೇ ಹಂತದ ತರಬೇತಿ
ಕೊಡಗು

ಮತಗಟ್ಟೆ ಅಧಿಕಾರಿಗಳಿಗೆ 2ನೇ ಹಂತದ ತರಬೇತಿ

April 8, 2019

ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲು ಡಿಸಿ ಅನೀಸ್ ಕಣ್ಮಣಿ ಜಾಯ್ ಸಲಹೆ
ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಏಪ್ರಿಲ್, 18 ರಂದು ನಡೆಯಲಿದ್ದು, ಜಿಲ್ಲೆಯ 543 ಮತಗಟ್ಟೆಗಳಿಗೆ ನಿಯೋಜಿ ಸಿರುವ ಪಿಆರ್‍ಒ, ಎಪಿಆರ್‍ಒ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ನಗರದ ಸಂತ ಜೋಸೆಫರ ಶಾಲೆ ಹಾಗೂ ವಿರಾಜ ಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಎರಡನೇ ಹಂತದ ತರಬೇತಿ ಕಾರ್ಯ ಕ್ರಮ ಭಾನುವಾರ ನಡೆಯಿತು.

ಮಸ್ಟರಿಂಗ್ ದಿನ ಮತ್ತು ಮತಗಟ್ಟೆ ಕೇಂದ್ರ ದಲ್ಲಿ ನಿರ್ವಹಿಸಬೇಕಾದ ಕಾರ್ಯ ಹಾಗೂ ಡಿಮಸ್ಟರಿಂಗ್ ಸಂದರ್ಭದಲ್ಲಿ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್ ಮತ್ತು ಮಾಸ್ಟರ್ ತರಬೇತಿ ದಾರರು ಹಲವು ಮಾಹಿತಿ ನೀಡಿದರು.

ಅಣುಕು ಮತದಾನ, ಅಂಚೆ ಮತಪತ್ರ, ಮಸ್ಟರಿಂಗ್, ಡಿಮಸ್ಟರಿಂಗ್ ಕಾರ್ಯ ನಿರ್ವಹಣೆ ಹಾಗೂ ಕಂಟ್ರೊಲ್ ಯೂನಿಟ್, ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್ ಮತ್ತಿ ತರ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಯಿತು. ಮತಗಟ್ಟೆ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವ ನಿಟ್ಟಿ ನಲ್ಲಿ ತರಬೇತಿ ಪಡೆದು ಮತದಾನದಂದು ಯಾವುದೇ ರೀತಿಯ ಸಮಸ್ಯೆ ಉಂಟಾಗ ದಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು. ಮತಗಟ್ಟೆ ಅಧಿ ಕಾರಿಗಳು ಮತಗಟ್ಟೆ ಕೇಂದ್ರದ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳಬೇಕಿದೆ, ಆ ದಿಸೆಯಲ್ಲಿ ಎಲ್ಲಾ ಹಂತದ ಮತಗಟ್ಟೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮಾತನಾಡಿ, ಮಸ್ಟರಿಂಗ್ ದಿನದಂದು ಮತಗಟ್ಟೆಯ ಎಲ್ಲಾ ಸಿಬ್ಬಂದಿಗಳು ಕಡ್ಡಾಯ ವಾಗಿ ನಿಗದಿತ ಸಮಯಕ್ಕೆ ಹಾಜರಾಗಬೇಕು. ತಮ್ಮ ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರಸ್ಪರ ಪರಿಚಯ ಮಾಡಿಕೊಳ್ಳಬೇಕು, ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಸಹಿ ಮಾಡು ವುದು.
ಯಾವುದೇ ಮತಗಟ್ಟೆ ಅಧಿಕಾರಿ ಇತರೆ ಸಿಬ್ಬಂದಿ ಗೈರು ಆದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ ರಿಗೆ ತಿಳಿಸುವುದು. ರಜೆ ಹೋದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು. ಮಸ್ಟರಿಂಗ್ ಪಟ್ಟಿಯಿಂದ ದೃಢಪಡಿಸಿಕೊಳ್ಳಬೇಕು ಎಂದರು.
ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾ ವಣಾಧಿಕಾರಿ ಟಿ.ಜವರೇಗೌಡ ಮಾತನಾಡಿ ಮತಗಟ್ಟೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಧಿಕಾರಿಯಿಂದ ಮತದಾನ ಕ್ಕೆ ಸಂಬಂಧಿಸಿದ ಎಲ್ಲಾ ಸಾಮಾಗ್ರಿಗಳನ್ನು ಪಡೆದು ಚುನಾವಣೆ ಕರ್ತವ್ಯ ನಿರ್ವಹಿಸ ಬೇಕು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ತಮ್ಮ ಕಾರ್ಯ ತಂಡ ಸದಸ್ಯರ ಒಗ್ಗೂಡಿಸುವುದು, ಸಾಮಾಗ್ರಿ ವಿತರಿಸುವ ಮಸ್ಟರಿಂಗ್ ಕೌಂಟರ್‍ಗೆ ತೆರಳುವುದು ತಂಡದ ಸದಸ್ಯರೊಂದಿಗೆ ಮಸ್ಟರಿಂಗ್ ವಿಭಾಗದಿಂದ ವಿವಿಧ ಸಾಮಾಗ್ರಿ ಪಡೆಯುವುದು. ಸಾಮಾಗ್ರಿ ಪಡೆದ ನಂತರ ಮತ್ತೊಮ್ಮೆ ಸಾಮಾಗ್ರಿ ಪರಿಶೀಲಿಸಿ ಕೊಳ್ಳುವುದು ಮತ್ತಿತರ ಬಗ್ಗೆ ಗಮನ ವಹಿಸಬೇಕಿದೆ ಎಂದು ಸಲಹೆ ಮಾಡಿದರು.

ಮಾಸ್ಟರ್ ತರಬೇತಿದಾರರಾದ ವಾಲ್ಟರ್ ಡಿಮೆಲ್ಲೊ, ಷಂಶುದ್ದಿನ್ ಮತ್ತು ದಿವಾಕರ ಅವರು ವಿದ್ಯುನ್ಮಾನ ಮತಯಂತ್ರ, ಅಣಕು ಮತದಾನ, ಕಂಟ್ರೋಲ್ ಹಾಗೂ ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್ ಅಳವಡಿ ಸುವುದು. ಮತಗಟ್ಟೆ ಕೇಂದ್ರದಲ್ಲಿ ಮತ ದಾನದಂದು ಪೂರ್ವ ಸಿದ್ಧತೆ ಮಾಡಿ ಕೊಳ್ಳುವ ಬಗ್ಗೆ ಮಾಹಿತಿ ನೀಡಿ ದರು. ತಹಶೀಲ್ದಾರಾದ ನಟೇಶ್, ಗೋವಿಂದ ರಾಜು ಇತರರು ಇದ್ದರು.

Translate »