ಕೋಲ್ಕತಾ, ಮೇ 21- ಪಶ್ಚಿಮ ಬಂಗಾಳದಲ್ಲಿ ಸಂಭ ವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವ ಘಡಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಮೃತ ಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
72 ಮಂದಿ ಪೈಕಿ 15 ಮಂದಿ ಕೋಲ್ಕತ್ತಾದಲ್ಲಿಯೇ ಮೃತ ಪಟ್ಟಿದ್ದು, ಇತರೆ 5 ಜಿಲ್ಲೆಗಳಲ್ಲಿ ಹೆಚ್ಚು ಸಾವು ಸಂಭವಿಸಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಅಂಫಾನ್ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ.
ಪರಿಹಾರ ನೀಡುವುದಾಗಿ ಸಿಎಂ ಘೋಷಿ ಸಿದ್ದಾರೆ. ಅಲ್ಲದೆ ಅಂಫಾನ್ ಚಂಡಮಾರುತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀದಿ ಮನವಿ ಮಾಡಿದ್ದಾರೆ.
ಗರಿಷ್ಠ ಗಾಳಿಯ ವೇಗ 190 ಕಿ.ಮೀ ಮತ್ತು ಧಾರಾಕಾರ ಮಳೆಯೊಂದಿಗೆ ಅಬ್ಬರಿಸುತ್ತಿರುವ ಅಂಫಾನ್ನಿಂದ ಸುಂದರಬನ್ ಪ್ರದೇಶ ಮತ್ತು ದಕ್ಷಿಣ ಬಂಗಾಳದ 6 ಜಿಲ್ಲೆಗಳು ತತ್ತರಿಸಿವೆ. ಒಡಿಶಾದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪಶ್ಚಿಮ ಬಂಗಾಳದಲ್ಲಿ ಆತಂಕ ಸೃಷ್ಟಿಸಿದ್ದು, ಸಂತ್ರಸ್ತರ ಸ್ಥಳಾಂತರ ಕಾರ್ಯ ಭರದಿಂದ ಸಾಗಿದೆ.
ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಅಂಫಾನ್ ಸೂಪರ್ ಚಂಡಮಾರುತ ಭಾರೀ ಅವಾಂತರವನ್ನೇ ಸೃಷ್ಟಿಸಿದ್ದು, ನಷ್ಟದ ಮೌಲ್ಯಮಾಪನಕ್ಕಾಗಿ ಶೀಘ್ರದಲ್ಲೇ ಎರಡೂ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯ ತಂಡ ರವಾನೆಯಾಗಲಿದೆ.