ಎನ್‍ಸಿಸಿಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ
News

ಎನ್‍ಸಿಸಿಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ

January 24, 2022

ಬೆಂಗಳೂರು: ಸ್ವಾತಂತ್ರೋತ್ಸವದ 75ನೇ ವರ್ಷಾ ಚರಣೆಯ ಸಂದರ್ಭದಲ್ಲಿ 75 ಯುನಿಟ್‍ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್ ಗಳಿಗೆ ಈ ಬಾರಿ ಎನ್‍ಸಿಸಿಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಹೊಸ 75 ನೇತಾಜಿ ಅಮೃತ ಎನ್‍ಸಿಸಿ ಶಾಲೆಗಳ ಘೋಷಣೆ, ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಚಾಲನೆ, 75 ಪೈಲಟ್‍ಗಳ ತರಬೇತಿಗೆ ಚಾಲನೆ ನೀಡಿ ಮಾತನಾಡು ತ್ತಿದ್ದರು. ಎನ್‍ಸಿಸಿ ಸೇರುವ ಯುವಕರಲ್ಲಿ ಆಸಕ್ತಿ ಹೆಚ್ಚು ಮಾಡಿ ಯುವಕರನ್ನು ಉತ್ತೇಜಿಸಲು ಈ ತೀರ್ಮಾನಕ್ಕೆ ಬರಲಾಗಿದೆ. ಪ್ರತಿಯೊಬ್ಬರಿಗೂ 12,000 ರೂ.ಗಳನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಭರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯದ ಶಾಲೆಗಳಲ್ಲಿ 44,000 ಕೆಡೆಟ್ ಗಳಿದ್ದು, ಎನ್‍ಸಿಸಿಯಲ್ಲಿ ಕಷ್ಟಕರವಾಗಿರುವ ಕಾರ್ಯಕ್ರಮ ವನ್ನು ಪುನರ್ ರಚಿಸಲು ರಕ್ಷಣಾ ಸಚಿವಾಲಯದ ಒಪ್ಪಿಗೆ ಪಡೆದು, ಅವರಿಗೆ ಸರ್ಕಾರ ಎನ್.ಸಿ.ಸಿ ಚಟುವಟಿಕೆಗಳಿಗೆ ಹಣದ ಸಂಪೂರ್ಣ ನೆರವು ನೀಡಲಾಗುವುದು. ಹಾಗೂ 44 ಸಾವಿರ ಘಟಕಗಳನ್ನು ಕಾಲೇಜುಗಳಿಗೆ ಸ್ಥಳಾಂತರ ಮಾಡಿ ಒಟ್ಟು 50 ಸಾವಿರಕ್ಕಿಂತ ಹೆಚ್ಚು ಕೆಡೆಟ್‍ಗಳನ್ನು ಮುಂದಿನ ವರ್ಷ ಕಾಲೇಜಿಗಳಲ್ಲಿ ರೂಪಿಸುವ ಯೋಜನೆ ಇದೆ ಎಂದರು. ಇದಕ್ಕೆ ರಕ್ಷಣಾ ಸಚಿವಾಲಯದ ಅನುಮತಿ ಅಗತ್ಯವಿದ್ದು, ಅನುಮತಿ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ನಿಂತುಹೋಗಿದ್ದ ಸರ್ಕಾರಿ ಪ್ಲೈಯಿಂಗ್ ಶಾಲೆ ಪುನರಾರಂಭ ಮಾಡಿರುವುದು ಕಿರೀಟಪ್ರಾಯವಾಗಿದೆ. 100 ಜನರಿಗೆ ತರಬೇತಿ ನೀಡುವ ತೀರ್ಮಾನ ಮಾಡಲಾಗಿದ್ದು ಟ್ವಿನ್ ಇಂಜಿನ್ ವಿಮಾನವನ್ನೂ ಇಲ್ಲಿ ತರಲಾಗಿದೆ. ಪೂರ್ಣಚಾಲಿತ ರನ್‍ವೇ ಪ್ರಾರಂ ಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ, ಸ್ಥಳದ ವ್ಯವಸ್ಥೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇದರೊಂದಿಗೆ ಮಹಿಳಾ ಸ್ವರಕ್ಷಣೆಗೆ ಪೆÇಲೀಸ್ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದಲ್ಲಿ ಮಹಿಳೆಯರ ರಕ್ಷಣೆಯಾಗಬೇಕು. ಮಹಿಳಾ ಸ್ವಯಂ ರಕ್ಷಣೆ ಶಾಲಾ ಕಾಜೇಜುಗಳಲ್ಲಿಯೂ ಹಮ್ಮಿಕೊಳ್ಳಬೇಕು. ಹೆಲಿಟೂರಿಸಂ ಮುಂತಾದ ಹತ್ತು ಹಲವು ಕಾರ್ಯಕ್ರಮಗಳು ನೇತಾಜಿಯವರ ಜನ್ಮದಿನದಂದು ಆಗುತ್ತಿದೆ. ಯುವಕರಿ ಗಾಗಿಯೇ ರೂಪಿಸಿರುವ ಕಾರ್ಯಕ್ರಮಗಳು ಇವು. ಇದು ಜ್ಞಾನದ ಶತಮಾನ ಅವಕಾಶ ಗಳ ಶತಮಾನವಾಗಿದ್ದು, ಅವುಗಳ ಉಪಯೋಗವನ್ನು ಪಡೆದು ಎಲ್ಲಾ ರಂಗಗಳ ಲ್ಲಿಯೂ ಮುಂದೆ ಬಂದಾಗ ಮಾತ್ರ ದೇಶ, ರಾಜ್ಯ ಮುಂದೆ ಬರುತ್ತದೆ ಎಂದರು.

Translate »