ಗೋಣಿಕೊಪ್ಪ ದಸರಾ; ವಾಹನ ಸಂಚಾರ ಮಾರ್ಗ ಬದಲಾವಣೆ
ಕೊಡಗು

ಗೋಣಿಕೊಪ್ಪ ದಸರಾ; ವಾಹನ ಸಂಚಾರ ಮಾರ್ಗ ಬದಲಾವಣೆ

October 16, 2018

ಮಡಿಕೇರಿ: ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಕ್ಟೋಬರ್, 19 ರ ಸಂಜೆ 4 ಗಂಟೆಯಿಂದ ಅಕ್ಟೋಬರ್, 20ರ ಬೆಳಗ್ಗೆ 8 ಗಂಟೆಯವರೆಗೆ ಗೋಣಿಕೊಪ್ಪದಲ್ಲಿ ಬದಲಿ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅದಿsೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ಬದಲಿ ವಾಹನ ಸಂಚಾರ ವ್ಯವಸ್ಥೆ: ಗೋಣಿಕೊಪ್ಪಲು ನಗರದ ಉಮಾ ಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ ಪೊನ್ನಂಪೇಟೆ ರಸ್ತೆ ಜಂಕ್ಷನ್‍ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳಿಗೆ ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜ ಪೇಟೆಗೆ ಹೋಗಲು ಬದಲಿ ಮಾರ್ಗದ ವ್ಯವಸ್ಥೆ.

ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗ ವಾಗಿ ಮೈಸೂರಿಗೆ ಹೋಗುವ ವಾಹನಗಳಿಗೆ ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್-ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ಬದಲಿ ಮಾರ್ಗದ ವ್ಯವಸ್ಥೆ. ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ-ವಿರಾಜಪೇಟೆ-ಸಿದ್ದಾಪುರ-ಪಿರಿಯಾಪಟ್ಟಣ-ಮೈಸೂರು ಕಡೆಗೆ ಬದಲಿ ಮಾರ್ಗದ ವ್ಯವಸ್ಥೆ. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಬಾಳಲೆಯಿಂದ ಗೋಣಿಕೊಪ್ಪ ಮಾರ್ಗ ವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.

ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜ ಪೇಟೆಗೆ ಸಂಚರಿಸುವುದು. ಮೈಸೂರು-ತಿತಿಮತಿ-ಗೋಣಿ ಕೊಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ-ಕೋಣನಕಟ್ಟೆ-ಪೊನ್ನಪ್ಪ ಸಂತೆ-ನಲ್ಲೂರು-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ಗೋಣಿಕೊಪ್ಪ-ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ನಲ್ಲೂರು-ಪೊನ್ನಪ್ಪಸಂತೆ-ಕೋಣನಕಟ್ಟೆ-ತಿತಿಮತಿ ಮಾರ್ಗವಾಗಿ ಸಂಚರಿಸುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳಿಗೆ ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.

ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವಿರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ, ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ-ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ, ತಿತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪಲು ಆರ್.ಎಂ.ಸಿ. ಆವರಣದಲ್ಲೂ ಹಾಗೂ ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್ ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

Translate »