ಬೆಂಗಳೂರು: ಆಪರೇಷನ್ ಕಮಲಕ್ಕೆ ಅವ ಕಾಶ ನೀಡದಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಕುಮಾರ ಸ್ವಾಮಿ ಭೇಟಿ ನೀಡಿದ ಸಂದರ್ಭ ದಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್, ಹೆಚ್. ನಾಗೇಶ್ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಲಾಗಿದೆ. ಪಕ್ಷೇತರ ಶಾಸಕ ಶಂಕರ್ ಇತ್ತೀಚೆಗೆ ಶಾಸಕ ರಮೇಶ್ ಜಾರಕಿಹೊಳಿ ನಿವಾ ಸದಲ್ಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಮತ್ತು ಸಿದ್ಧರಾಮಯ್ಯ ಚರ್ಚೆ ನಡೆಸಿ ದ್ದಾರೆ. ಸುಮಾರು 45 ನಿಮಿಷ ಸಿದ್ದ ರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ಸಿಎಂ ಕಾವೇರಿ ನಿವಾಸದಿಂದ ತೆರಳಿದ್ದಾರೆ. ಆರ್. ಶಂಕರ್, ನಾಗೇಶ್ ಅವರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳುವ ಬಗ್ಗೆ ಸಿದ್ದರಾಮಯ್ಯರೊಂದಿಗೆ ಸಿಎಂ ಕುಮಾರ ಸ್ವಾಮಿ ಚರ್ಚೆ ನಡೆಸಿದ್ದಾರೆನ್ನಲಾಗಿದೆ.