ಜಿಎಸ್‍ಎಸ್‍ಎಸ್ ವಿದ್ಯಾರ್ಥಿಗಳಿಗೆ ಜನಪದೋತ್ಸವದಲ್ಲಿ ಪ್ರಶಸ್ತಿ
ಮೈಸೂರು

ಜಿಎಸ್‍ಎಸ್‍ಎಸ್ ವಿದ್ಯಾರ್ಥಿಗಳಿಗೆ ಜನಪದೋತ್ಸವದಲ್ಲಿ ಪ್ರಶಸ್ತಿ

July 16, 2019

ಮೈಸೂರು, ಜು.15- ಮೈಸೂರು ಸಿದ್ಧಾರ್ಥನಗರದಲ್ಲಿರುವ ಗೀತಾ ಶಿಶು ಶಿಕ್ಷಣ ಸಂಘದ ಬದರಿಪ್ರಸಾದ್‍ಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು-ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಮೈಸೂರು ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ಎಂ.ಪಿ.ಎಸ್. ಜನಪದೋತ್ಸವದಲ್ಲಿ ಭಾಗವಹಿಸಿದ್ದರು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ರಹೀಶ್ ಕಾವ್ಯ ವಾಚನ ಹಾಗೂ ಶೀರ್ಷಿಕೆ ರಚನೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನದೊಂದಿಗೆ ಟ್ರೋಫಿ, ಪ್ರಶಸ್ತಿ ಪತ್ರ ಮತ್ತು ರೂ. 1000/- ನಗದು ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ಎಂ. ಭಾರದ್ವಾಜ ಕಾವ್ಯ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ಪಡೆದಿದ್ದಾರೆ.

Translate »