ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೈಬಿಡುವಂತೆ ಹೆಚ್‍ಡಿಕೆ ಆಗ್ರಹ
ಮೈಸೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೈಬಿಡುವಂತೆ ಹೆಚ್‍ಡಿಕೆ ಆಗ್ರಹ

June 24, 2020

ಬೆಂಗಳೂರು, ಜೂ.23(ಕೆಎಂಶಿ)-ರಾಜ್ಯದಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರ ಈ ನಿರ್ಧಾರದಿಂದ ತಕ್ಷಣ ಹಿಂದೆ ಸರಿಯಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಆಗ್ರಹಿಸಿದ್ದಾರೆ. ಪರೀಕ್ಷೆ ನಡೆಸಲೇಬೇಕೆಂದಾದರೆ, ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ. ಕೊರೊನಾ ಸೋಂಕು ಸಾವಿನ ನಗಾರಿ ಬಾರಿಸುತ್ತಿದೆ. ಸುಮಾರು 8 ಲಕ್ಷ SSಐಅ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ, ಪೋಷಕರು, ಪರೀಕ್ಷಾ ಸಿಬ್ಬಂದಿ ಸೇರಿ 24 ಲಕ್ಷ ಮಂದಿಯ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ತೆಲಂಗಾಣ ರಾಜ್ಯದಲ್ಲಿ SSಐಅ ಪರೀಕ್ಷೆಯನ್ನು ರದ್ದುಪಡಿಸಿ, ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು, ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ, ಏನಾದರೂ ಅವಘಢಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದರು.

Translate »