ಬ್ರಾಹ್ಮಣರಿಗೆ ಅವಹೇಳನ ಮಾಡಿದ `ಪೆÇಗರು’; ಮೌನ ಮುರಿದ ಪೇಜಾವರ ಸ್ವಾಮೀಜಿ

ಉಡುಪಿ,ಫೆ.23-ನಂದ ಕಿಶೋರ್ ನಿರ್ದೇಶನದ ‘ಪೆÇಗರು’ ಚಲನಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ ಮಾಡಲಾಗಿದೆ ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಖಂಡಿಸಿದ್ದಾರೆ.

ಚಿತ್ರದ ಅನೇಕ ದೃಶ್ಯಗಳಲ್ಲಿ ಬ್ರಾಹ್ಮಣರನ್ನು ತೀರಾ ಅವಮಾ ನಿಸಲಾಗಿದೆ. ಇದರಿಂದ ಬ್ರಾಹ್ಮಣರ ಮನಸ್ಸಿಗೆ ತೀರಾ ನೋವಾಗಿದೆ. ಇಂಥ ಬೆಳವಣಿಗೆ ಅಸಹನೀಯ. ಬ್ರಾಹ್ಮಣರನ್ನು ಮಾತ್ರವಲ್ಲ ಯಾವುದೇ ಜಾತಿ, ಸಮುದಾಯಗಳನ್ನು ನಿಂದಿಸುವ, ಅವಮಾನಿ ಸುವ ಪ್ರವೃತ್ತಿ ಸಲ್ಲ. ಮನರಂಜನೆ ಹೆಸರಲ್ಲಿ ವಿಕೃತಿ ಸಲ್ಲ, ಈ ಭ್ರಮೆಯಿಂದ ಚಿತ್ರರಂಗ ಹೊರಬರಬೇಕು. ಪೆÇಗರು ಚಿತ್ರದಲ್ಲಿ ಬ್ರಾಹ್ಮಣ ಸಮಾಜವನ್ನು ನಿಂದಿಸುವ ದೃಶ್ಯಗಳನ್ನು ತಕ್ಷಣ ತೆಗೆದು ಹಾಕಬೇಕು ಎಂದು ಪೇಜಾವರ ಶ್ರೀಗಳು ಆಗ್ರಹಿಸಿದ್ದಾರೆ.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅನೇಕ ಬ್ರಾಹ್ಮಣ ಸಂಘಟನೆಗಳು ಪ್ರತಿಭಟನೆ ನಡೆಸಿ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಅರ್ಪಿಸುವ ಸಂದರ್ಭ ಶ್ರೀಗಳು ಅಲ್ಲಿದ್ದ ಬ್ರಾಹ್ಮಣ ಸಮಾಜದ ಮುಖಂಡರ ಮೊಬೈಲ್ ಮೂಲಕ ಚಲನಚಿತ್ರ ಮಂಡಳಿಯ ಪ್ರಮುಖರೊಂದಿಗೆ ಮಾತನಾಡಿ ಖಂಡನೆ ವ್ಯಕ್ತಪಡಿಸಿದರು. ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಿದ್ದಾರೆ.