ಶಾಲಾ-ಕಾಲೇಜು ಹಂತದಲ್ಲೇ ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮೂಹ
ಮೈಸೂರು

ಶಾಲಾ-ಕಾಲೇಜು ಹಂತದಲ್ಲೇ ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮೂಹ

June 1, 2019

ಮೈಸೂರು: ಧೂಮ ಪಾನ ಹಾಗೂ ತಂಬಾಕು ಸೇವನೆಯಂತಹ ದುಶ್ಚಟಗಳಿಂದಾಗಿಯೇ ಹಲವರು ಶಾಲಾ ಹಂತದಲ್ಲಿಯೇ ವಿದ್ಯಾಭÁ್ಯಸ ಮೊಟಕು ಗೊಳಿಸುತ್ತಿದ್ದಾರೆ ಎಂದು ಶಾಸಕ ಎಸ್.ಎ. ರಾಮದಾಸ್ ವಿಷಾದ ವ್ಯಕ್ತಪಡಿಸಿದರು.

ಮೈಸೂರಿನ ಕಲಾಮಂದಿರ ಸಂಜೀ ವಿನಿ ಕ್ಯಾನ್ಸರ್ ಕೇರ್ ಟ್ರಸ್ಟ್, ಮಹಾರಾಣಿ ಮಹಿಳಾ ಪದವಿ ಪೂರ್ವ ಕಾಲೇಜು, ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಭಾರತೀಯ ವಿದ್ಯಾಭವನ ಸಂಯುಕ್ತಾಶ್ರಯಲ್ಲಿ ನಡೆದ `ವಿಶ್ವ ತಂಬಾಕು ವಿರೋಧಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀ ಚಿನ ದಿನಗಳಲ್ಲಿ ಯುವ ಸಮೂಹ ದುಶ್ಚಟ ಗಳಿಗೆ ದಾಸರಾಗುತ್ತಿದ್ದಾರೆ. ಶಾಲಾ ಮತ್ತು ಕಾಲೇಜು ಹಂತದಲ್ಲಿಯೇ ಧೂಮಪಾನ, ಗುಟ್ಕ ಸೇರಿದಂತೆ ಹಲವು ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಇದ ರಿಂದ ಶಾಲಾ ಹಂತದಲ್ಲಿಯೇ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವುದು ಕಂಡು ಬಂದಿದೆ. ದುರಾಭ್ಯಾಸಗಳಿಗೆ ದಾಸರಾಗಿರುವುದರೊಂ ದಿಗೆ ನೋವು ಅನುಭವಿಸುತ್ತಿದ್ದಾರೆ. ಇವರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾ ಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದರು.

ಆರೋಗ್ಯ ಮೈಸೂರು ಕಾರ್ಯಕ್ರಮ ದಡಿ ಮೈಸೂರು ನಗರವನ್ನು ಮುಂದಿನ 5 ವರ್ಷದ ಅವಧಿಯಲ್ಲಿ ದಿ ವಾರ್ ಎಗೇ ನೆಸ್ಟ್ ಕ್ಯಾನ್ಸರ್ ಹೆಸರಿನಲ್ಲಿ ಹಲವು ಜಾಗೃತಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ನಾವು ಸೇವಿಸುವ ಗಾಳಿ, ಕುಡಿಯುವ ನೀರು, ಆಹಾರ ಪದ್ಧತಿ ಸೇರಿದಂತೆ ಜೀವನ ಕ್ರಮ, ತಂಬಾಕು ಬಳಕೆ ವಿರುದ್ಧ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕ್ಯಾನ್ಸರ್ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ರೋಗಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಕ್ಯಾನ್ಸರ್ ಎಂದಾಕ್ಷಣ ಯಾರೂ ಧೃತಿಗೆಡುವ ಅಗತ್ಯ ವಿಲ್ಲ. ಆತ್ಮಸ್ಥೆರ್ಯ ಹಾಗೂ ಮನೋಬಲ ಇದ್ದರೆ ಕ್ಯಾನ್ಸರ್ ಕಾಯಿಲೆಯಿಂದ ಗುಣ ಮುಖರಾಗಬಹುದು. ಇದಕ್ಕೆ ಹಲವಾರು ಮಂದಿ ಉದಾಹರಣೆ ಇದ್ದಾರೆ ಎಂದರು.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ತಂಬಾಕು ಮತ್ತು ತಂಬಾಕು ಉತ್ಪನ್ನಗಳು ಮನುಷ್ಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಶ್ವಾಶ ಕೋಶಕ್ಕೆ ಹಾನಿ ಮಾಡುತ್ತದೆ. ಇದಲ್ಲದೇ ಮನುಷ್ಯನ ದೇಹದ ಎಲ್ಲಾ ಅಂಗಗಳ ಮೇಲು ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳು ತ್ತದೆ. ಇದು ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿದ ಹಿನ್ನೆಲೆ ವಿಶ್ವಸಂಸ್ಥೆ ಪ್ರತಿವರ್ಷ ತಂಬಾಕು ವಿರೋಧಿ ದಿನಾಚರಣೆ ಮಾಡುವ ಮೂಲಕ ಜನರಲ್ಲಿ ತಂಬಾಕಿನಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಿದೆ ಎಂದರು. ಇದಕ್ಕೂ ಮುನ್ನಾ ಮಹಾರಾಣಿ ಮಹಿಳಾ ಪದವಿಪೂರ್ವ ಕಾಲೇಜು ಆವ ರಣದಿಂದ ವಿದ್ಯಾರ್ಥಿಗಳು ತಂಬಾಕಿನ ದುಷ್ಪ ರಿಣಾಮದ ಬಗ್ಗೆ ಜಾಗೃತಿ ಜಾಥಾ ನಡೆಸಿ ದರು. ಮೇಯರ್ ಪುಷ್ಪಲತಾ ಜಗನ್ನಾಥ್, ಕಾಲೇಜಿನ ಪ್ರಾಂಶುಪಾಲ ಪಿ.ಸೋಮಣ್ಣ, ಮಾಜಿ ಕಾರ್ಪೊರೇಟರ್ ಸ್ನೇಕ್‍ಶ್ಯಾಮ್ ಜಾಥಾಕ್ಕೆ ಚಾಲನೆ ನೀಡಿದರು. ನಂತರ ರಮೇಶ್ ಬಿಳಿಕೆರೆ ಸಂಪಾದಿತ `ಕಿಡಿ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇ ಶ್ವರನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಹಂದನಹಳ್ಳಿ ಎಸ್.ರಮೇಶ್, ವಕೀಲ ಕ್ಷಮಾ ನರಗುಂದ್, ಪತ್ರಕರ್ತ ಅಂಶಿ ಪಸನ್ನಕುಮಾರ್, ಸೋಮಶೇಖರ್, ನಿವೃತ್ತ ಯೋಧÀ ಕಾಂತರಾಜು ಇತರರಿದ್ದರು

Translate »