ಎಲ್ಲದಕ್ಕೂ ಕಡ್ಡಾಯವಾಗುತ್ತಾ ಆಧಾರ್?: ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮೈಸೂರು

ಎಲ್ಲದಕ್ಕೂ ಕಡ್ಡಾಯವಾಗುತ್ತಾ ಆಧಾರ್?: ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

September 26, 2018

ನವದೆಹಲಿ: ವಿಶಿಷ್ಟ ಗುರುತಿನ ಸಂಖ್ಯೆ(ಆಧಾರ್)ಯ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸ ಲಿದೆ. ದೇಶದ ಏಕೈಕ ಬಯೋಮೆಟ್ರಿಕ್ ರಾಷ್ಟ್ರೀಯ ಗುರುತಿನ ಚೀಟಿಯ ಸಾಂವಿ ಧಾನಿಕ ಮಾನ್ಯತೆ ಪ್ರಶ್ನಿಸಿ ದೇಶಾದ್ಯಂತ ಹಲವಾರು ಅರ್ಜಿಗಳು ಸರ್ವೋಚ್ಚ ನ್ಯಾಯಾ ಲಯಕ್ಕೆ ಸಲ್ಲಿಸಲಾಗಿತ್ತು. 38 ದಿನಗಳ ಕಾಲ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿ ಸಿದ್ದು, ನಾಳೆ ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ಖಾಸಗಿತನವನ್ನು ಎತ್ತಿ ಹಿಡಿದು ತೀರ್ಪು ನೀಡಿದ್ದರಿಂದಾಗಿ ಆಧಾರ್ ತೀರ್ಪಿನ ಬಗ್ಗೆಯೂ ಈಗ ಕುತೂಹಲ ಮೂಡಿದೆ. ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಹಿರಿಯ ವಕೀಲ ರಾದ ಕಪಿಲ್ ಸಿಬಲ್, ಪಿ.ಚಿದಂಬರಂ, ರಾಕೇಶ್ ದ್ವಿವೇದಿ, ಶ್ಯಾಮ್ ದಿವಾನ್, ಅರವಿಂದ್ ದಾತಾರ್ ಅವರು ವಿವಿಧ ಪಕ್ಷಗಳ ಪರವಾಗಿ ವಾದ ಮಂಡಿಸಿದ್ದಾರೆ. ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗಳಾದ ಎ.ಕೆ.ಸಿಕ್ರಿ, ಎ.ಎಮ್.ಖನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಕೂಡ ಇದ್ದಾರೆ. ಆಧಾರ್ ಸಂಖ್ಯೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಕರ್ನಾ ಟಕ ಹೈಕೋರ್ಟ್‍ನ ಮಾಜಿ ನ್ಯಾಯ ಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಅವರು ಮೂಲ ಅರ್ಜಿದಾರರಾಗಿದ್ದು, ಒಟ್ಟು 27 ಅರ್ಜಿದಾರರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆಧಾರ್ ಯೋಜ ನೆಗೆ ಸಾಂವಿಧಾನಿಕ ಸ್ವರೂಪ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2016ರಲ್ಲಿ ಕಾಯ್ದೆ ಪಾಸು ಮಾಡಿತ್ತು.

Translate »