ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಮೈಸೂರು

ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

September 18, 2018

ಮೈಸೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸೆಪ್ಟೆಂಬರ್ 18 ರಿಂದ 27ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ತಾಲೂಕು ಕೇಂದ್ರ ಗಳಲ್ಲಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾ ಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಸೆಪ್ಟೆಂಬರ್ 18: ಮೈಸೂರು ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹ, ಸೆಪ್ಟೆಂಬರ್ 19: ಮೈಸೂರು ತಾಲೂಕು ಕಚೇರಿ ಆವರಣ, ಸೆಪ್ಟೆಂಬರ್ 20: ತಾಲೂಕು ಕಚೇರಿ ಆವರಣ ತಿ.ನರಸೀಪುರ, ಸೆಪ್ಟೆಂಬರ್ 22: ಪಿಡಬ್ಲ್ಯೂಡಿ ಅತಿಥಿ ಗೃಹ ಹೆಚ್.ಡಿ.ಕೋಟೆ, ಸೆಪ್ಟೆಂಬರ್ 24: ಪಿಡಬ್ಲ್ಯೂಡಿ ಅತಿಥಿ ಗೃಹ ಪಿರಿಯಾಪಟ್ಟಣ, ಸೆಪ್ಟೆಂಬರ್ 25: ಪಿಡಬ್ಲ್ಯೂಡಿ ಅತಿಥಿ ಗೃಹ ಹುಣಸೂರು, ಸೆಪ್ಟೆಂಬರ್ 26: ತಾಲೂಕು ಕಚೇರಿ ಆವರಣ ನಂಜನಗೂಡು ಹಾಗೂ ಸೆಪ್ಟೆಂಬರ್ 27: ಪಿಡಬ್ಲ್ಯೂಡಿ ಅತಿಥಿ ಗೃಹ ಕೆ.ಆರ್.ನಗರ ತಾಲೂಕಿನಲ್ಲಿ ನಡೆಯಲಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಿ ಗಾಗಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರು ನೀಡಬಹು ದಾಗಿದೆ. ಮಾಹಿತಿಗೆ ದೂ.ಸಂಖ್ಯೆ 0821-2521100 ಅನ್ನು ಸಂಪರ್ಕಿಸುವುದು. ಸಾರ್ವ ಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Translate »