ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿ
ಮೈಸೂರು

ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿ

February 16, 2021

ಬೆಂಗಳೂರು,ಫೆ.15(ಕೆಎಂಶಿ)-ರೈತರ ಹಿತಕ್ಕಾಗಿ ರಾಜ್ಯ ಕೃಷಿ ಇಲಾಖೆ ಕೈಗೊಂಡಿ ರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಚಿತ್ರನಟ ದರ್ಶನ್ ಅವ ರನ್ನು ಕೃಷಿ ಇಲಾಖೆಯ ಪ್ರಚಾರ ರಾಯಭಾರಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆಯ ಪ್ರಚಾರ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ನಟ ದರ್ಶನ್ ಒಪ್ಪಿಕೊಂಡಿದ್ದಾರೆ.

ಸ್ವತಃ ಕೃಷಿಕರೂ ಆಗಿರುವ ದರ್ಶನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ, ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಇಲಾಖೆಯ ಪ್ರಚಾರ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿದೆ.

Translate »