ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠದ ಪಾತ್ರ ಹಿರಿದು
News

ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠದ ಪಾತ್ರ ಹಿರಿದು

February 15, 2023

ಬೆಂಗಳೂರು, ಫೆ. 14(ಕೆಎಂಶಿ)- ಆದಿಚುಂಚನ ಗಿರಿ ಮಠ ತನ್ನದೇ ಇತಿಹಾಸ ಹೊಂದಿದ್ದು, ಭವ್ಯ ಕರ್ನಾಟಕ ಕಟ್ಟಲು ದೊಡ್ಡ ಸಾಧನೆ ಮಠದಿಂದ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಜ್ಯೋತಿರ್ದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕ ವಾಗಿ ಒಂದು ದಶಕ ಕಳೆದಿದ್ದು, ಇದು ಆತ್ಮಾವ ಲೋಕನ ಹಾಗೂ ಸಿಂಹಾವಲೋಕನ ಮಾಡಿಕೊಳ್ಳುವ ಘಟ್ಟ. ಹತ್ತು ವರ್ಷಗಳಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳು ಅಪಾರ ಸಾಧನೆ ಮಾಡಿದ್ದಾರೆ.

ಬಾಲಗಂಗಾಧರನಾಥ ಸ್ವಾಮಿಗಳು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಕಾಲದಲ್ಲಿ ಸಂಸ್ಥೆ ಬೆಳೆಯುತ್ತಿದೆ. ಪ್ರಕಾಶ ನಾಥ ಸ್ವಾಮೀಜಿ ಕೂಡ ಬೆಂಗಳೂರಿನ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿ ದ್ದಾರೆ. ಕಷ್ಟಪಟ್ಟು ನಿರ್ಮಾಣವಾಗಿರುವ ಸಂಸ್ಥೆಗಳನ್ನು ಅಂತರರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಂಡು ಬೆಳೆಸಿರುವುದು ಸಂತಸದ ಸಂಗತಿ ಎಂದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಪ ರೂಪದ ಸ್ವಾಮೀಜಿಗಳು. ವಿಜ್ಞಾನ ಮತ್ತು ತತ್ವಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ಅವೆರಡನ್ನೂ ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ನೀಡುವ ದೊಡ್ಡ ಸಾಧನೆ ಅವರದ್ದು. ವಿಚಾರಗಳನ್ನು ವೈಜ್ಞಾನಿಕವಾಗಿ ನೋಡಿ ತತ್ವಜ್ಞಾನವನ್ನು ಅಳವಡಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ವಿಧಿವಿಧಾನ ಸ್ವಾಮೀಜಿಗಳಲ್ಲಿದ್ದರೆ ಇಡೀ ಸಮಾಜಕ್ಕೆ ದಾರಿದೀಪ ವಾಗಬಹುದು ಎನ್ನಲು ಅವರು ಉದಾಹರಣೆಯಾ ಗಿದ್ದಾರೆ ಎಂದರು. ಒಂದು ಲಕ್ಷ ಐವತ್ತು ಸಾವಿರ ಮಕ್ಕಳು ಬಿಜಿಎಸ್ ಸಂಸ್ಥೆಗಳಲ್ಲಿ ಕಲಿಯುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ, ಆಸ್ಪತ್ರೆಯಿಂದ ಪಬ್ಲಿಕ್ ಶಾಲೆಯ ವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಮ್ಮದೇ ಆದ ಬ್ರಾಂಡ್ ಸೃಷ್ಟಿಸಿರುವುದು ಕರ್ನಾಟಕದ ಹೆಮ್ಮೆ.

ಕರ್ನಾಟಕದಾದ್ಯಂತ ಸಂಸ್ಥೆಯ ಸೇವೆಗಳು ಲಭ್ಯ ವಾಗಬೇಕೆನ್ನುವುದು ಸ್ವಾಮೀಜಿಗಳ ಇಚ್ಛೆ. ಉತ್ತರ ಕರ್ನಾಟಕದಲ್ಲಿ ಈ ಸಂಸ್ಥೆಗಳನ್ನು ತೆರೆದು ಅಭಿವೃದ್ಧಿ ಮಾಡುತ್ತಿದ್ದಾರೆ. ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಲು ಇತ್ತ ಕರ್ನಾಟಕದ ಜನ ಬಿಜಿಎಸ್ ಆಸ್ಪತ್ರೆಗೆ ನೇರವಾಗಿ ಬರುವಷ್ಟು ಸೌಲಭ್ಯಗಳು ದೊರೆಯುತ್ತಿವೆ ಎಂದರು. ಬಿಜಿಎಸ್ ಸಂಸ್ಥೆಗಳು ಉತ್ತರ ಮತ್ತು ದಕ್ಷಿಣ ಬೆಸೆ ಯುವ ಕೇಂದ್ರವಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಮೂಡಿಸುವಲ್ಲಿ ಮಠ ಪ್ರಮುಖ ಪಾತ್ರ ವಹಿಸಿದೆ. ಸರ್ಕಾರ ಮಾಡುವ ಕೆಲಸವನ್ನು ಕರ್ನಾಟಕದ ಅನೇಕ ಮಠಗಳು ಮಾಡಿಕೊಂಡು ಬಂದಿವೆ.

ಕರ್ನಾಟಕದಲ್ಲಿ ಶಿಕ್ಷಣ ಪ್ರಮಾಣ ಹೆಚ್ಚಳವಾಗಿದ್ದರೆ, ಸಾಧನೆಯಾಗಿದ್ದರೆ ಅದಕ್ಕೆ ಮಠಮಾನ್ಯಗಳು ಯಾವುದೇ ಬೆಂಬಲವಿಲ್ಲದೆ ಮಾಡಿರುವುದು ಕಾರಣ. ನಿರ್ಮಲಾನಂದನಾಥ ಸ್ವಾಮೀಜಿಗಳ ಒಂದು ದಶಕದ ಸಾಧನೆ ಅಭೂತಪೂರ್ವವಾಗಿದೆ. ಆತ್ಮಾ ವಲೋಕನ ಮಾಡಿಕೊಳ್ಳುವ ಸಂದರ್ಭದಲ್ಲಿ ಭವಿಷ್ಯದ ಚಿಂತನೆ ಮಾಡಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ನೀಡಿ ಅವನನ್ನು ಸ್ವಾವ ಲಂಬಿಯನ್ನಾಗಿಸಲು ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಅಗತ್ಯ. ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಇದು ದೊರೆಯಲಿ ಎಂದರು. ಮಕ್ಕಳ ಪ್ರೌಢಶಾಲಾ ಜೀವನ ಅತ್ಯಂತ ಮಹತ್ವದ ಘಟ್ಟ. ಮಕ್ಕಳನ್ನು ನೋಡಿದಾಗ ನಾನು ನಮ್ಮ ರಾಜ್ಯ ಹಾಗೂ ದೇಶದ ಭವಿಷ್ಯದ ಬಗ್ಗೆ ಆಶಾದಾಯಕವಾಗಿ ಆಲೋಚಿಸುತ್ತೇನೆ. ಭವಿಷ್ಯ ನಿಮ್ಮಲ್ಲೇ ಅಡಗಿದ್ದು, ದೇಶವನ್ನು ಯುವಜನಾಂಗ ಕಟ್ಟಬೇಕು.

ಶೇ.40ರಷ್ಟು ಯುವ ಸಮೂಹವಿರುವ ಈ ದೇಶಕ್ಕೆ ಅತ್ಯಂತ ದೊಡ್ಡ ಭವಿಷ್ಯವಿದೆ. ನಿರಂತರ ಪ್ರಯತ್ನ ಮಾಡಬೇಕು. ಪರಿಶ್ರಮದಲ್ಲಿ ನಂಬಿಕೆಯಿಡಿ. ಸೋಲುಗಳಿಗೆ ಎದೆಗುಂದಬೇಡಿ. ಪರಮಹಂಸ ಪಕ್ಷಿಯಂತೆ ಎತ್ತರಕ್ಕೆ ಹಾರುವ ಕನಸು ಕಾಣಿರಿ ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

Translate »