ಪ್ರತಿಷ್ಠಿತ ಶಾಲೆಗೆ ಪ್ರವೇಶ: ಅರ್ಜಿ ಆಹ್ವಾನ
ಮೈಸೂರು

ಪ್ರತಿಷ್ಠಿತ ಶಾಲೆಗೆ ಪ್ರವೇಶ: ಅರ್ಜಿ ಆಹ್ವಾನ

April 25, 2019

ಮೈಸೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ವಿಜಯನಗರದಲ್ಲಿರುವ ಭಾರತೀಯ ವಿದ್ಯಾ ಭವನ, ಲಷ್ಕರ್ ಮೊಹಲ್ಲಾದಲ್ಲಿರುವ ಗುಡ್‍ಶಫರ್ಡ್, ಕೃಷ್ಣವಿಲಾಸ್ ರಸ್ತೆಯಲ್ಲಿರುವ ಅವಿಲಾ ಕಾನ್ವೆಂಟ್, ಹುಣಸೂರು ತಾಲೂಕಿನ ಶಾಸ್ತ್ರೀ ಚಾರಿಟಬಲ್ ಟ್ರಸ್ಟ್, ಸೆಂಟ್ ಜೋಸೆಫ್ ಹೈಸ್ಕೂಲ್, ನಂಜನಗೂಡು ತಾಲೂಕಿನ ತಾಂಡವಪುರದಲ್ಲಿರುವ ಕ್ರೈಸ್ಟ್ ಸ್ಕೂಲ್, ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯಲ್ಲಿರುವ ಬಾಲಗಂಗಾಧರನಾಥ ಸ್ವಾಮಿ ಬಾಲ್ ಜಗತ್ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸುವವರು 5ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.60%ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಯಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 2 ಲಕ್ಷದೊಳಗಿರಬೇಕು. ಆಸಕ್ತರು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೈಸೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮೇ10 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂಸಂಖ್ಯೆ 0821-2344661 ಸಂಪರ್ಕಿಸುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »