ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಸಲಹೆ
ಹಾಸನ

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಸಲಹೆ

August 29, 2018

ಬೇಲೂರು: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವರಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಇಲ್ಲಿನ ಪದವಿಪೂರ್ಣ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜಿನಿಂದ ಮಂಗಳವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಭಾರತ ಕ್ರೀಡಾ ವಿಭಾಗದಲ್ಲಿ ಉತ್ತಮ ಸಾಧನೆ ತೋರುವಲ್ಲಿ ವಿಫಲವಾಗಿದೆ. ದೇಶದಲ್ಲಿ 130 ಕೋಟಿ ಜನಸಂಖ್ಯೆ ಇದ್ದರೂ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಪ್ರಾಥಮಿಕ ಹಂತದಿಂದಲೇ ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದು ತಿಳಿಸಿದರು.

ಈ ವೇಳೆ ಜಿಪಂ ಸದಸ್ಯ ಲತಾ ಮಂಜೇಶ್ವರಿ, ಪುರಸಭೆ ಅಧ್ಯಕ್ಷೆ ಭಾರತಿ ಅರುಣು ಕುಮಾರ್, ಸದಸ್ಯರಾದ ಶ್ರೀನಿಧಿ, ರವಿ ಅಣ್ಣೇಗೌಡ, ಜಿಪಂ ಮಾಜಿ ಅಧ್ಯಕ್ಷೆ ಹೇಮಾವತಿ ಮಂಜುನಾಥ್, ಪ್ರಾಂಶುಪಾಲರಾದ ಜಿ.ಕೆ.ವೀಣಾ, ಗೋಪಾಲ್ ಹಾಜರಿದ್ದರು.

Translate »