ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಕಾರ್ಮಿಕರಿಗೆ ಸಲಹೆ
ಕೊಡಗು

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಕಾರ್ಮಿಕರಿಗೆ ಸಲಹೆ

June 5, 2018

ವಿರಾಜಪೇಟೆ: ಕಾರ್ಮಿಕರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜ ಪೇಟೆ ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಪಾಲಿಬೆಟ್ಟದ ಹೊಸಳ್ಳಿ ಟಾಟಾ ಕಾಫಿ ಎಸ್ಟೇಟ್‍ನ ಸಂಯುಕ್ತ ಆಶ್ರಯದಲ್ಲಿ ಎಸ್ಟೇಟ್ ಸಭಾಂಗಣದಲ್ಲಿ ”ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ತಂಬಾಕು ನಿಷೇಧ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ನ್ಯಾಯಾ ಧೀಶ ಶಿವಾನಂದ ಲಕ್ಷ್ಮಣ್ ಅಂಚಿ ಅವರು ಕಾರ್ಮಿಕರು ಗಳು ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಆದರೂ ಕಾನೂನು ತಿಳಿದುಕೊಳ್ಳುವುದರೊಂದಿಗೆ ಇರುವಂತಹ ಸೌಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರಕಾರಗಳು ತಂಬಾಕು ನಿಷೇಧ ಮಾಡಿದ್ದರೂ ಕೂಡ ಯುವಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಂಬಾಕು ಸೇವನೆ ಯಿಂದ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳು ತ್ತಿರುವುದು ಕಂಡುಬರುತ್ತಿದೆ. ಅದರಿಂದ ಕಾರ್ಮಿಕರು ಮತ್ತು ಸಾರ್ವಜನಿಕರು ಉಚಿತ ಕಾನೂನಿನ ಅರಿವು ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗ ಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಎಂ.ನಂಜಪ್ಪ ಮಾತನಾಡಿ, ಕಾರ್ಮಿಕರು ಕಾನೂನಿನ ಅರಿವು ಪಡೆದುಕೊಂಡು ತಮ್ಮ ಮಕ್ಕಳ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ಅವಕಾಶಗಳನ್ನು ಸದುಪಯೋಗ ಪಡಿಸಿ ಕೊಳ್ಳುವಂತಾಗಬೇಕು ಎಂದರು. ವಿರಾಜಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಮಹದೇವಸ್ವಾಮಿ ಮಾತನಾಡಿ, ಸರಕಾರದಿಂದ ಕಾರ್ಮಿಕರುಗಳಿಗೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಪಾಲಿಬೆಟ್ಟ ಟಾಟಾ ಕಾಫಿ ಎಸ್ಟೇಟ್‍ನ ವ್ಯೆವಸ್ಥಾಪಕ ಕೆ.ಎಸ್.ಮಾಚಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಕೀಲರಾದ ಬಿ.ಬಿ.ಮಾದಪ್ಪ ಅವರು ಕಾರ್ಮಿಕ ರುಗಳ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಿದರು.

Translate »