ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಕ್ತಾಯ ಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ. ಬಹುತೇಕ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ದೆಹಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚರ್ಚಿಸ ಲಿದ್ದಾರೆ. ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಗಿ ನೇಮಕಗೊಂಡಿರುವ ಸಚಿವ ಸಿ.ಟಿ.ರವಿ ಸೇರಿದಂತೆ ನಾಲ್ಕೈದು ಸಚಿವರನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ದೊರಕಿಸಿಕೊಡುವ ಆಲೋಚನೆ ಯಡಿ ಯೂರಪ್ಪ ಅವರದ್ದಾಗಿದ್ದು, ಇದಕ್ಕಾಗಿ ವರಿಷ್ಠರ ಹಸಿರು ನಿಶಾನೆ ಗಾಗಿ ದೆಹಲಿಯತ್ತ ಮುಖ ಮಾಡಿದ್ದಾರೆ. ಮೂಲಗಳ ಪ್ರಕಾರ ಅ.2ರಂದು ಸಚಿವ ಸಿ.ಟಿ.ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದಾಗಿ ಸಂಪುಟದಲ್ಲಿ ಒಟ್ಟು 7 ಸ್ಥಾನಗಳು ಖಾಲಿ ಉಳಿಯಲಿದ್ದು, ಅಕ್ಟೋಬರ್ ಮೊದಲ ಅಥವಾ 2ನೇ ವಾರದಲ್ಲಿ ಸಂಪುಟ ಪುನಾರಚನೆಯಾಗುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಸಿಎಂ ಯಡಿಯೂರಪ್ಪ ಅವರು ವರಿಷ್ಠರ ಒಪ್ಪಿಗೆ ಪಡೆದು ಸಂಪುಟ ಪುನಾರಚನೆ ಮಾಡಿದರೆ ಸಂಪುಟದಲ್ಲಿ ಹಾಲಿ ಇರುವ ನಾಲ್ವರು ಸಚಿವರನ್ನು ಕೈಬಿಟ್ಟು ಹೊಸದಾಗಿ 10 ಮಂದಿಯನ್ನು ಸಂಪುಟಕ್ಕೆ ತೆಗೆದು ಕೊಳ್ಳುವ ಸಾಧ್ಯತೆ ಇದೆ. ಸಚಿವರಾದ ಸಿಟಿರವಿ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ ಸಂಪುಟದಿಂದ ಕೊಕ್ ಪಡೆಯುವ ಪಟ್ಟಿಯಲ್ಲಿ ದ್ದಾರೆ. ಸಂಪುಟದಲ್ಲಿ 10 ಸ್ಥಾನಗಳು ಖಾಲಿ ಉಳಿಯುವುದರಿಂದ ವಲಸಿಗ ಮತ್ತು ಮೂಲ ಒಳಗೊಂಡ 10 ಮಂದಿಯನ್ನು ಹೊಸ ದಾಗಿ ತೆಗೆದುಕೊಂಡು ಪೂರ್ಣ ಮಟ್ಟದ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.