ಅಂತರ ಗಂಗೆ ನಿಗಮದ ಮೂಲಕ  ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ
News

ಅಂತರ ಗಂಗೆ ನಿಗಮದ ಮೂಲಕ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ

March 17, 2020

ಬೆಂಗಳೂರು,ಮಾ.16(ಕೆಎಂಶಿ)- ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ಕಾಪೆರ್Çರೇಷನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ವೀರಭದ್ರಯ್ಯ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಸದ್ಯದ ಪರಿಸ್ಥಿತಿಯ ಮಳೆ ಹಂಚಿಕೆ, ಅಂತರ್ಜಲ ಮಟ್ಟವನ್ನು ಗಮನಿಸಿದಾಗ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಗಳಿಗೆ ಪ್ರತ್ಯೇಕವಾಗಿ ಒತ್ತು ನೀಡುವುದು ಅನಿವಾರ್ಯವಾಗಿರುವುದರಿಂದ ನಿಗಮದ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಅಂತರಗಂಗೆ ಕಾಪೆರ್Çರೇಷನ್ ಪ್ರಾರಂಭಿಸಲಾಗಿದೆ ಎಂದರು.

ಪ್ರಸಕ್ತ 2019-20ರಲ್ಲಿ 336 ಕೋಟಿ ರೂ.ಗಳನ್ನು ಯೋಜನೆಗಾಗಿ ಬಜೆಟ್‍ನಲ್ಲಿ ಇಡ ಲಾಗಿದ್ದು, 269 ಕೋಟಿ ರೂ.ಬಿಡುಗಡೆಯಾದ ಹಣದಲ್ಲಿ 254ಕೋಟಿ ರೂ.ಗಳನ್ನು ಯೋಜನೆಗಾಗಿ ವ್ಯಯಿಸಲಾಗಿದೆ ಎಂದರು. ಹನಿ, ತುಂತುರು ಮತ್ತು ರೈನ್‍ಗನ್ ಘಟಕಗಳನ್ನು ಅನುಷ್ಠಾನ ಮಾಡುವುದು. ರೈತರಿಗೆ ಗುಣಮಟ್ಟದ ಸಾಮಗ್ರಿಗಳ ಸರಬರಾಜು, ಸಮಯೋ ಚಿತ ಮತ್ತು ರೈತರಿಗೆ ತ್ವರಿತವಾಗಿ ವಿತರಿಸುವುದು. ವಿವಿಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರಿಯಾಯಿತಿ ಯೋಜನೆಗಳ ಮತ್ತು ಸೂಕ್ಷ್ಮ ನೀರಾವರಿ ಯೋಜನೆಗಳ ಉಪಯುಕ್ತತೆ ಕುರಿತು ರೈತ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ. ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಮುಂತಾದ ಇಲಾಖೆಗಳಲ್ಲಿ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಏಕಗವಾಕ್ಷಿ ಮಾದರಿಯಲ್ಲಿ ನಿಗಮದಿಂದ ಅನುಷ್ಠಾನ ಮಾಡುವುದರಿಂದ ರಿಯಾಯಿತಿ ಸೌಲಭ್ಯ ಪುನರಾವರ್ತನೆ ಮತ್ತು ಅನುದಾನ ದುರ್ಬಳಕೆಗಳನ್ನು ತಡೆಯಬಹು ದಾಗಿದೆ. ಫಲಾನುಭವಿಗಳ ಅರ್ಜಿ ಸ್ವೀಕೃತಿ ಪ್ರಕ್ರಿಯೆಯಿಂದ ಅನುಷ್ಠಾನದವರೆಗೆ ಗಣ ಕೀಕರಿಸಲಾಗುವುದು ಎಂದರು. ಪ್ರಸ್ತುತ ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳು ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಲ್ಲಿ ಪ್ರತ್ಯೇಕವಾಗಿ ನಡೆಯುತ್ತಿವೆ. ರೈತರು ಬೇರೆಬೇರೆ ಬೆಳೆಗಳಿಗೆ ಪ್ರತ್ಯೇಕ ಅರ್ಜಿಗಳನ್ನು ನೀಡಬೇಕಾಗಿರುತ್ತದೆ. ಪ್ರಸ್ತುತ ರೇಷ್ಮೆ ಇಲಾಖೆ ಹೊರತುಪಡಿಸಿ ಇಲಾಖೆವಾರು ಪ್ರತ್ಯೇಕ ತಂತ್ರಾಂಶಗಳಿದ್ದು ರೈತರು ಎಲ್ಲಾ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

Translate »