ಪ್ರತಿಭಾ ಪುರಸ್ಕಾರಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಪ್ರತಿಭಾ ಪುರಸ್ಕಾರಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

August 2, 2018

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2018ರ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ಪ್ರವರ್ಗ 1, 2ಎ, 3ಎ ಹಾಗೂ 3ಬಿ.ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿ ಗಳು ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ www. backwardclasses.kar.nic.in ಅಥವಾ ಸಹಾಯ ವಾಣಿ 8050770004 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Translate »