ದಲಿತ ಸಾಹಿತಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಮೈಸೂರು

ದಲಿತ ಸಾಹಿತಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

June 15, 2018

ಮೈಸೂರು:  ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ. 35,000 ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿ ಸಿದ್ದು ಅರ್ಜಿಗಳನ್ನು ಆಹ್ವಾನಿಸಿದ್ದು. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ 04, ಸೈಜ್ ಹಾಳೆಯಲ್ಲಿ ಡಿ.ಟಿ.ಪಿ ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು, ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣ ಸಲಾಗುವುದಿಲ್ಲ.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು ವೃತ್ತಿ ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಒಬ್ಬ ಲೇಖಕರ ಒಂದು ಪ್ರತಿಯನ್ನು ಮಾತ್ರ ಆಯ್ಕೆಯಾಗಿ ಪರಿಗಣ ಸಲಾಗುವುದು. ಈಗಾಗಲೇ ಸಾಕಷ್ಟು ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಜೂ. 30ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ ಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ವೆಬ್‍ಸೈಟ್: www. kannadapustakapradhikara.com ದೂ.ಸಂಖ್ಯೆ: 080-22484516/ 22017704 ಇಲ್ಲಿ ಸಂಪರ್ಕಿ ಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Translate »