ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದಲ್ಲಿ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆ ನಡೆಸುತ್ತಿರುವ ಶ್ರೀ ಮುರುಘರಾಜೇಂದ್ರಸ್ವಾಮಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರ 1, 2ಎ, 2ಬಿ, 3ಎ, 3ಬಿ ಮತ್ತು ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 5ರೊಳಗೆ ಅರ್ಜಿಯನ್ನು ನಿಲಯ ಪಾಲಕರಿಗೆ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪುಸ್ತಕ, ಬಿಎ, ಬಿ.ಎಡ್ ತರಬೇತಿ ಪಡೆದ ಶಿಕ್ಷಕರಿಂದ ಭೋದನೆ ಕೊಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ. 9731359884 ಸಂಪರ್ಕಿಸಲು ಕೋರಲಾಗಿದೆ.