ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ
News

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ

February 23, 2022

ಶಿವಮೊಗ್ಗ, ಫೆ. 22- ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾರ್ವ ಜನಿಕ ಆಸ್ತಿಪಾಸ್ತಿ, ಜೀವ ಹಾನಿ ಸಂಭವಿಸಬಹುದಾದ ಘಟನೆಗಳು ಯಾವುದೇ ಕ್ಷಣದಲ್ಲೂ ನಡೆಯಬಹುದಾದ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಎರಡು ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೂಡ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಪೆÇಲೀಸರು ವಾಹನದಲ್ಲಿ ಬಂದು ಮೈಕ್ ಮೂಲಕ, ನಾಗರಿಕರು ಯಾರೂ ಹೊರಗೆ ಬರಬಾರದು, ಗುಂಪಾಗಿ ನಿಲ್ಲಬಾರದು ಎಂದು ಅನೌನ್ಸ್‍ಮೆಂಟ್ ಮಾಡುತ್ತಿರುವುದು ಕಂಡುಬಂತು.

ಯಾರೂ ಕೂಡ ಮನೆಯಿಂದ ಹೊರಗೆ ಬರಬಾರದು, ಅಂಗಡಿ-ಮುಂಗಟ್ಟುಗಳನ್ನು ತೆರೆಯಬಾರದು, ಜನರು ಬರಬಾರದು ಎಂದು ಅನೌನ್ಸ್‍ಮೆಂಟ್‍ನ್ನು ಇಡೀ ಶಿವಮೊಗ್ಗ ನಗರದಾದ್ಯಂತ ಮಾಡಲಾಗುತ್ತಿದೆ. ನಗರದ ಸೂಕ್ಷ್ಮ ಪ್ರದೇಶಗಳ ಪ್ರವೇಶಕ್ಕೆ ಜನರಿಗೆ ನಿರ್ಬಂಧ ವಿಧಿಸಲಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಬ್ಯಾರಿಕೇಡ್‍ಗಳನ್ನು ಪೆÇಲೀಸರು ಅಳವಡಿಸಿದ್ದಾರೆ. ಬಿ.ಎಚ್.ರಸ್ತೆ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪೆÇಲೀಸ್ ಸರ್ಪಗಾವಲು: ಗಲಭೆ ಪೀಡಿತ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರವು ಮೂರು ಎಸ್ಪಿಗಳು, ಒಬ್ಬ ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿಗಳು, 39 ಪಿಐಗಳು, 54 ಪಿಎಸ್‍ಐಗಳು, 48 ಎಎಸ್‍ಐಗಳು, 819 ಎಚ್ಸಿ/ಪಿಸಿಗಳು, 20 ಕೆಎಸ್‍ಆರ್‍ಪಿ, ಬೆಟಾಲಿಯನ್‍ಗಳು, 10 ಡಿಎಆರ್ ಬೆಟಾಲಿಯನ್‍ಗಳು ಮತ್ತು ಒಂದು ಆರ್‍ಎಫ್‍ಎಫ್ ಬೆಟಾಲಿಯನ್ ಅನ್ನು ನಿಯೋಜಿಸಿದೆ. ಶಿವಮೊಗ್ಗದ ಗಲ್ಲಿ ಗಲ್ಲಿಗಳಲ್ಲಿ ಪೆÇಲೀಸರು ನಿಯೋಜನೆಗೊಂಡಿದ್ದಾರೆ. ನಿನ್ನೆ ಹರ್ಷನ ಕಗ್ಗೊಲೆ ನಂತರ ಮೃತದೇಹ ಮೆರವಣಿಗೆ ಹಿನ್ನೆಲೆಯಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯಲ್ಲಿ ಹಣ್ಣಿನ ಅಂಗಡಿ ಮೇಲೆ ಕಲ್ಲೆಸೆತವಾಗಿದೆ. ಶೋ ರೂಮ್, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾ ಗಿದೆ, ಅನೇಕ ಮನೆಗಳು, ಅಂಗಡಿ-ಮುಂಗಟ್ಟು, ವಾಹನಗಳು ಹಾನಿಗೀಡಾಗಿವೆ.

Translate »