ಗೌರಿ ಲಂಕೇಶ್ ಹತ್ಯೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್
News

ಗೌರಿ ಲಂಕೇಶ್ ಹತ್ಯೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

July 1, 2021

ನವದೆಹಲಿ, ಜೂ.30- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ವಿರುದ್ಧ ದಾಖಲಾಗಿದ್ದ ಆರೋಪ ಗಳನ್ನು ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್‍ನ ಆದೇಶ ಪ್ರಶ್ನಿಸಲಾದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಸಂಘಟಿತ ಅಪರಾಧ ನಿಯಂ ತ್ರಣ ಕಾಯ್ದೆ (ಕೆಸಿಒಸಿಎ) ಅಡಿ ಮೋಹನ್ ನಾಯಕ್ ವಿರುದ್ಧ ದಾಖಲಾಗಿದ್ದ ಆರೋಪಗಳನ್ನು ರದ್ದು ಪಡಿಸಿ ರಾಜ್ಯ ಹೈಕೋರ್ಟ್ ಏಪ್ರಿಲ್ 22ರಂದು ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಗೌರಿ ಸೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎ.ಎಂ.ಖನ್ವಿಲ್ಕರ್ ನೇತೃತ್ವದ ಪೀಠ, ರಾಜ್ಯ ಸರ್ಕಾರ, ದಕ್ಷಿಣ ಕನ್ನಡ ಮೂಲದ ಆರೋಪಿ ಮೋಹನ್ ನಾಯಕ್‍ಗೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಹೈಕೋರ್ಟ್ ಆದೇಶದ ನಂತರ ಆರೋಪಿಯು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯೂ ಪೂರ್ಣ ಗೊಂಡಿದೆ. ಆದರೆ, ಇದೀಗ ವಿಚಾರಣೆ ನಡೆದಿರುವ ಪ್ರಕರಣದ ವಿಲೇ ವಾರಿ ಆಗುವವರೆಗೆ ಆರೋಪಿಗೆ ಜಾಮೀನು ನೀಡ ಕೂಡದು ಎಂದು ಕವಿತ ಪರ ವಕೀಲರಾದ ಹುಜೇಫಾ ಅಹ್ಮದಿ ಹಾಗೂ ಅಪರ್ಣಾ ಭಟ್ ನ್ಯಾಯಪೀಠದೆದುರು ವಾದ ಮಂಡಿಸಿ ದರು. ಗೌರಿ ಹತ್ಯೆ ಮಾತ್ರವಲ್ಲದೆ, ಇತರ ಅನೇಕ ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿರುವ ಪುಣೆಯ ಅಮೋಲ್ ಕಾಳೆ ನೇತೃತ್ವದ ಗುಂಪಿನಲ್ಲಿ ಮೋಹನ್ ನಾಯಕ್ ಸದಸ್ಯ ನಾಗಿದ್ದಾನೆ ಎಂಬುದು ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‍ಐಟಿ) ಸಲ್ಲಿಸಿರುವ ವರದಿ ಯಿಂದ ತಿಳಿದುಬಂದಿದೆ ಎಂದು ಹೇಳಿದರು.

Translate »