ಕುಂದಗೋಳ, ಚಿಂಚೋಳಿ ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ಮೈಸೂರು

ಕುಂದಗೋಳ, ಚಿಂಚೋಳಿ ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

May 17, 2019

ಬೆಂಗಳೂರು: ಕುಂದಗೋಳ-ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾ ರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದ್ದು, ಭಾನುವಾರ ಮತದಾನ ನಡೆಯಲಿದೆ. ಕೊನೆ ಕ್ಷಣದಲ್ಲಿ ಮತದಾರರ ಓಲೈಕೆಗೆ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸಮಾವೇಶ, ಸಭೆಗಳ ಸಮರದಲ್ಲಿ ತೊಡಗಿದ್ದಾರೆ. ಶನಿವಾರ ಮನೆ-ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು, ಕ್ಷೇತ್ರದ ಮತದಾರರಲ್ಲ ದವರು ಶುಕ್ರವಾರ ಸಂಜೆ 5 ಗಂಟೆಯೊಳಗೆ ಕ್ಷೇತ್ರ ಬಿಟ್ಟು ಹೊರಹೋಗುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಮುಖ ಮೂರೂ ಪಕ್ಷಗಳ ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕಿರುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಒಂದು ದಿನ ಬಾಕಿ ಇದ್ದು, ಬಿಜೆಪಿ ಮತ್ತು ಆಡಳಿತಾರೂಢ ದೋಸ್ತಿ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

 

Translate »