ಶ್ರೀಗಂಧ ಮರ ಕಡಿದು ಸಾಗಾಟಕ್ಕೆ ಯತ್ನ; ಇಬ್ಬರ ಬಂಧನ
ಕೊಡಗು

ಶ್ರೀಗಂಧ ಮರ ಕಡಿದು ಸಾಗಾಟಕ್ಕೆ ಯತ್ನ; ಇಬ್ಬರ ಬಂಧನ

November 20, 2018

ಸಿದ್ದಾಪುರ: ಕಾಫಿ ತೋಟದಲ್ಲಿದ್ದ ಶ್ರೀಗಂಧ ಮರವನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಮಾಯಮುಡಿ ವ್ಯಾಪ್ತಿಯ ರುದ್ರಬೀಡು ಗ್ರಾಮದ ಕಾಫಿತೋಟವೊಂದರಲ್ಲಿ ಇದ್ದ ಶ್ರೀಗಂಧದ ಮರವನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ ರುದ್ರಬೀಡು ಗ್ರಾಮದ ಮಾರ, ಸಿದ್ದ ಎಂಬುವರನ್ನು ತಿತಿಮತಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ ಇಪ್ಪತ್ತೈದು ಸಾವಿರ ಮೌಲ್ಯದ ಶ್ರೀಗಂಧ ವಶಪಡಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಗಣಪತಿ, ಅರಣ್ಯ ರಕ್ಷಕರಾದ ದೇವರಾಜು, ಶ್ರುತಿ, ಶಿವಪ್ಪ, ಅರಣ್ಯ ವೀಕ್ಷಕ ಪೆÇನ್ನಣ್ಣ, ರಾಜೇಶ್, ಚಾಲಕ ರಮೇಶ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Translate »