ವಿಶ್ವ ಮಾನವ ಪ್ರಶಸ್ತಿ ಪ್ರದಾನ

ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ಜಯಂತಿ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಶಾಸಕ ಎಲ್.ನಾಗೇಂದ್ರ ಪ್ರದಾನ ಮಾಡಿದರು. ಹಿರಿಯ ಸಾಹಿತಿ ಡಾ.ಕೆ.ವಿ. ನಾರಾಯಣ ಅವರಿಗೆ `ವಿಶ್ವ ಮಾನವ ಪ್ರಶಸ್ತಿ’, ಹಿರಿಯ ವಿದ್ವಾಂಸ ಡಾ.ಎಂ.ಚಿದಾನಂದ ಮೂರ್ತಿ ಅವರಿಗೆ `ಕರ್ನಾಟಕ ರತ್ನ ನಾಡೋಜ ಡಾ.ದೇಜಗೌ ಪ್ರಶಸ್ತಿ ಹಾಗೂ ಪತ್ರಕರ್ತ ಎಸ್.ನಾಗಣ್ಣ ಅವರಿಗೆ `ದಿವಂಗತ ಹೆಚ್.ಕೆ.ವೀರಣ್ಣಗೌಡ ಪತ್ರಿಕೋ ದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುವೆಂಪು ವಿದ್ಯಾವರ್ಧಕ ಟ್ರಸ್ಟ್‍ನ ಅಧ್ಯಕ್ಷ ಡಾ.ಜೆ.ಶಶಿಧರ ಪ್ರಸಾದ್ ಮತ್ತಿತರರು ಹಾಜರಿದ್ದರು.