ಅರಣ್ಯ ಸಿಬ್ಬಂದಿಯಿಂದ ಜಾಗೃತಿ ಪತ್ರ ಹಂಚಿಕೆ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಹಾದು ಹೋಗುವ ಪ್ರವಾಸಿಗರಿಗೆ ಅರಣ್ಯ ಪ್ರದೇಶದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿಯಿರುವ ಜಾಗೃತಿ ಪತ್ರವನ್ನು ಹಂಚುವ ಮೂಲಕ ಅರಣ್ಯ ಸಿಬ್ಬಂದಿ ಅರಿವು ಮೂಡಿಸಿದರು.

ಉದ್ಯಾನದ ಗೋಪಾಲಸ್ವಾಮಿ ಬೆಟ್ಟ ವಲಯದ ಮೇಲುಕಾಮನಹಳ್ಳಿ ಗೇಟ್ ಬಳಿ ಎಲ್ಲ ವಾಹನಗಳ ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾನಹ ನಿಲುಗಡೆ ಮಾಡಬಾರದು ಎಂಬ ಬಗ್ಗೆ ಮಾಹಿತಿಯಿರುವ ಕರಪತ್ರ ವಿತರಣೆ ಮಾಡಿದರು.