ಆಯುಷ್ಮಾನ್ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ವಿತರಣೆ
ಮೈಸೂರು ಗ್ರಾಮಾಂತರ

ಆಯುಷ್ಮಾನ್ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ವಿತರಣೆ

January 13, 2020

ಹುಣಸೂರು, ಜ.12(ಕೆಕೆ)-ತಾಲೂಕಿನ ಹನಗೂಡು ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಪಿ.ಮಂಜುನಾಥ್ ನೋಂದಾಯಿತ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ವಿತರಿಸಿದರು.

ಬಳಿಕ ಮಾತನಾಡಿದ ಅವರು, ತಾಲೂಕಿನ 41 ಗ್ರಾಪಂನಲ್ಲಿಯೂ ಕೂಡ ಆಯುಷ್ಮಾನ್ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ. 35 ರೂ. ನೀಡಿ ಕಾರ್ಡ್ ಪಡೆಯಬಹುದಾಗಿದೆ. ಎಲ್ಲರೂ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹನಗೋಡು ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಾಲೇಜು ಅಭಿವೃದ್ಧಿ, ಸೂಕ್ತ ಬಸ್ ನಿಲ್ದಾಣ ನಿರ್ಮಾಣವಾಗಬೇಕಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು ಎಂದರು. ಇದೇ ವೇಳೆ ನಾಡಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಡಾ.ಜೋಗೇಂದ್ರನಾಥ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸುಶೀಲಮ್ಮ, ತಾಪಂ ಸದಸ್ಯೆ ರೂಪಾ ನಂದೀಶ್, ಜಿಪಂ ಸದಸ್ಯ ಕಟ್ಟನಾಯ್ಕ, ಗ್ರಾಪಂ ಸದಸ್ಯ ಇಮ್ತಾಯಜ್ ಪಾಷಾ, ಉದ್ಯಮಿ ಕಾರ್ತಿಕ್, ಶಿವಣ್ಣ ಇದ್ದರು.

 

 

 

Translate »