ದುಡಿಮೆಯಲ್ಲಿ ದೇವರು ಕಂಡ ಕಾಯಕಯೋಗಿಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯ
ಚಾಮರಾಜನಗರ

ದುಡಿಮೆಯಲ್ಲಿ ದೇವರು ಕಂಡ ಕಾಯಕಯೋಗಿಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯ

May 8, 2019

ಚಾಮರಾಜನಗರ: ಕಾಯಕವೇ ಕೈಲಾಸ ತತ್ವದ ಮೂಲಕ ದುಡಿಮೆಯಲ್ಲಿ ದೇವರನ್ನು ಕಂಡ ಕಾಯಕಯೋಗಿ ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗ ದೊಂದಿಗೆ ಸರಳವಾಗಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಉದ್ಘಾ ಟಿಸಿ ಅವರು ಮಾತನಾಡಿದರು.

ಕುವೆಂಪು ಅವರು 20ನೇ ಶತಮಾನ ದಲ್ಲಿ ವಿಶ್ವಮಾನವತೆಯ ಕನಸು ಕಂಡಿದ್ದರು. ಅದನ್ನು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಜಾರಿಗೊಳಿಸಿದ್ದರು. ಜನ ಸಾಮಾನ್ಯ ರಿಗೆ ಅರ್ಥವಾಗುವ ಸರಳಭಾಷೆ ಕನ್ನಡದಲ್ಲಿ ಸಾಕಷ್ಟು ವಚನಗಳನ್ನು ರಚಿಸಿ ಅರಿವಿನ ಬೆಳಕನ್ನು ತೋರಿ ಸಮ ಸಮಾಜಕ್ಕೆ ನಾಂದಿ ಹಾಡಿದರು. ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರು ಎಂದರು.

ಬಸವಣ್ಣನವರು ಅನುಭವ ಮಂಟ ಪದ ಮೂಲಕ ದೇಶದ ಮೊದಲ ಸಂಸತ್ತನ್ನು ಸ್ಥಾಪಿಸಿ ಅಲ್ಲಿ ಸಾಮಾಜಿಕ, ಧಾರ್ಮಿಕ ಚರ್ಚೆಗಳನ್ನು ನಡೆಸುತ್ತಿದ್ದರು. ಅಂದಿನ ಸಮಾಜದಲ್ಲಿದ್ದ ಜಾತಿ ವ್ಯವಸ್ಥೆ, ವರ್ಣಭೇದÀ, ಲಿಂಗಭೇದವನ್ನು ಧಿಕ್ಕರಿಸಿ ಬಡವರು, ದೀನ ದಲಿತರು, ಮಹಿಳೆಯ ರನ್ನು ಅನುಭವ ಮಂಟಪದಲ್ಲಿ ಸೇರಿಸಿ ಕ್ರಾಂತಿಕಾರಿ ವಿಚಾರಗಳನ್ನು ವಚನಗಳ ಮೂಲಕ ಜನರಿಗೆ ತಲುಪಿಸಿದರು ಎಂದರು.

ಜಾತಿ ಭಾಷೆಯ ಭೇದವಿಲ್ಲದೆ ಲಿಂಗಶರಣ ತತ್ವ ಪ್ರತಿಪಾದಿಸಿದ ಬಸವಣ್ಣನವರು ತಳ ಸಮುದಾಯದವರಿಗೆ ದೇವಾಲಯ ಹಾಗೂ ಊರಿಗೆ ಪ್ರವೇಶ, ಕುಡಿಯುವ ನೀರಿನ ಹಕ್ಕು, ಮಹಿಳೆಯರು ಪುರುಷರಷ್ಟೇ ಸಮಾನ ಜೀವನ ನಡೆಸಲು ಕಾರಣರಾಗಿ ಕ್ರಾಂತಿಯೋಗಿ ಬಸವಣ್ಣ ಎನಿಸಿಕೊಂಡರು. ನುಡಿದಂತೆ ನಡೆದ ಬಸವಣ್ಣನವರು ರಚಿಸಿದ ವಚನಗಳು ಇಂದಿಗೂ ಜೀವಂತವಾಗಿವೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಓ ಕೆ.ಎಸ್.ಲತಾಕುಮಾರಿ ಮಾತ ನಾಡಿ, ಭಾರತದ ಇತಿಹಾಸದಲ್ಲಿ ಸಾಮಾಜಿಕ ಅಸಮಾನತೆ ವಿರುದ್ಧ ದನಿ ಎತ್ತಿದ ಅನೇಕ ಸಾಧು ಸಂತರು, ಶರಣರಲ್ಲಿ ಬಸವಣ್ಣನವರು ಅಗ್ರಗಣ್ಯ. ಮೌಢ್ಯ, ಡಾಂಬಿಕತೆ ಪ್ರಶ್ನಿಸಿ ವಚನ ಸಾಹಿತ್ಯದ ಮೂಲಕ ಜನಸಾಮಾನ್ಯ ರಲ್ಲಿ ಆತ್ಮವಿಶ್ವಾಸ ತುಂಬಿ ಸಮಾಜವನ್ನು ಪರಿಷ್ಕರಣೆಗೊಳಪಡಿಸಿದ ಕೀರ್ತಿ ಬಸವಣ್ಣ ನವರಿಗೆ ಸಲ್ಲುತ್ತದೆ ಎಂದರು.
ಜಗತ್ತಿನ ಎಲ್ಲಾ ಧರ್ಮಗಳ ಸಾರ ಅರಿತಿದ್ದ ಬಸವಣ್ಣನವರು ದಯೆ, ಕರುಣೆ ಇಲ್ಲದ ಧರ್ಮ ಯಾವುದು ಇಲ್ಲ. ದಯೆಯೇ ಧರ್ಮದ ಮೂಲವಯ್ಯ ಎಂದು ಸಾರಿ ವಿಶ್ವಮಾನ್ಯರಾದರು. ಅವರ ನಡೆ, ನುಡಿ, ಸದ್ಗುಣ, ವಚನಗಳನ್ನು ನಾವು ಅಳವಡಿಸಿ ಕೊಳ್ಳಬೇಕು ಎಂದರು.

ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಚನ್ನಪ್ಪ ಅವರು ಬಸವಣ್ಣನವರ ಕುರಿತು ಮಾತನಾಡಿದರು. ಎಡಿಸಿ ಸಿ.ಎಲ್. ಆನಂದ್, ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಕದಳಿ ಮಹಿಳಾ ತಂಡದ ಸದಸ್ಯರು ನಡೆಸಿಕೊಟ್ಟ ಬಸವಣ್ಣನವರ ವಚನಗಳ ಗಾಯನ ಸಂಗೀತ ಗಮನ ಸೆಳೆಯಿತು.

Translate »