ವಿಷ ಸೇವಿಸಿ, ಮನೆಗೆ ಬೆಂಕಿ ಇಟ್ಟುಕೊಂಡ ಭೂಪ
ಕೊಡಗು

ವಿಷ ಸೇವಿಸಿ, ಮನೆಗೆ ಬೆಂಕಿ ಇಟ್ಟುಕೊಂಡ ಭೂಪ

January 10, 2019

ಗೋಣಿಕೊಪ್ಪಲು: ಕಾನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋತೂರು ಗ್ರಾಮದ ಲಕ್ಕುಂದ ಹಾಡಿಯ ಮಲೆಯಾಳಿ ಸುರೇಂದ್ರ(45) ಎಂಬುವರು ವಿಷ ಸೇವಿಸಿ, ತನ್ನ ಮನೆಗೆ ಬೆಂಕಿ ಇಟ್ಟುಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನದ ವೇಳೆ ಸುರೇಂದ್ರ ವಿಷ ಸೇವಿಸಿ ತನ್ನ ಮನೆಗೆ ಬೆಂಕಿ ಇಟ್ಟುಕೊಂಡರೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಹೊಗೆಯಿಂದ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿ ಸುವ ಪ್ರಯತ್ನ ನಡೆಸಿದರಾದರೂ ಪ್ರಯೋಜನವಾಗಲಿಲ್ಲ. ವಿಷ ಸೇವಿಸಿದ್ದ ಸುರೇಂದ್ರ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಆತನನ್ನು ಕುಟ್ಟ ಆಸ್ಪತ್ರೆಗೆ ಸಾಗಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಾನಂದವಾಡಿಯ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯಸಿರೆಳೆದರು ಎಂದು ತಿಳಿದುಬಂದಿದೆ. ಮನೆ ಸಂಪೂರ್ಣ ಬೆಂಕಿಯಿಂದ ಹಾನಿಗೊಳಗಾಗಿದ್ದು, ಮನೆಯ ಹಕ್ಕುಪತ್ರ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯದ ದಾಖಲಾತಿಗಳು ಸುಟ್ಟು ಭಸ್ಮವಾಗಿದೆ.

ಗೋಣಿಕೊಪ್ಪಲುವಿನ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರೇಂದ್ರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುರೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Translate »