ಮಡಿಕೇರಿಯಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ
ಕೊಡಗು

ಮಡಿಕೇರಿಯಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ

April 1, 2022

ಮಡಿಕೇರಿ, ಮಾ.31- ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆಯು ಗುರುವಾರ ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಿತು.

ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಪುಷ್ಪ ನಮನ ಸಲ್ಲಿಸಿದರು.
ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನ ವನ್ನು ವೀಕ್ಷಿಸಿದರು. ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಎದುರು ಜನರಲ್ ತಿಮ್ಮಯ್ಯ ಅವರ ಮ್ಯೂಸಿಯಂನ ವಿಷಯಗಳನ್ನೊಳಗೊಂಡ ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಸಚಿವರು ಬಹುಮಾನ ವಿತರಣೆ ಮಾಡಿದರು. ನಂತರ ಸ್ಮಾರಕ ಭವನದ ಹತ್ತಿರ ಹೊಸದಾಗಿ ನಿರ್ಮಿತ ವಾದ ‘ಃಐಔSSUಒ’ ಕೆಫೆಯನ್ನು ಸಚಿವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಸಿ.ನಾಣಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇ ಗೌಡ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆ ಯಂಡ ರವಿ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಾಜಿ ಸೈನಿಕರು, ಅಧಿಕಾರಿಗಳು, ಇತರರು ಇದ್ದರು.

 

Translate »