ಸಿಎಂ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ ಸಚಿವ ಸಾ.ರಾ.ಮಹೇಶ್
ಮೈಸೂರು

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ ಸಚಿವ ಸಾ.ರಾ.ಮಹೇಶ್

June 22, 2019

ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಬಿಜೆಪಿಯವರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು.

ಮೈಸೂರಲ್ಲಿ ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಯವರು ವಾಮ ಮಾರ್ಗದಿಂದ ರಾಜ್ಯದ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಯಾವುದೇ ಸಲಹೆ, ಸೂಚನೆ ನೀಡುತ್ತಿಲ್ಲ. ಅಂತವ ರಿಂದ ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು. ಗ್ರಾಮ ವಾಸ್ತವ್ಯದಿಂದ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದು ಹೇಳುವು ದಿಲ್ಲ. ಆದರೆ ಒಂದಷ್ಟು ಸಮಸ್ಯೆಗಳಿಗೆ ಪರಿಹಾರವಂತೂ ಸಿಕ್ಕಿದೆ. ಜೊತೆಗೆ ಅಧಿಕಾರಿಗಳ ಸ್ಪಂದನೆಯೂ ಸಿಗಲಿದೆ ಎನ್ನುವ ವಿಶ್ವಾಸವಿದೆ. ಕೊಡಗಿನಲ್ಲಿ ಗ್ರಾಮ ವಾಸ್ತವ್ಯ ಮಾಡಬೇಕೆಂಬುದು ನಮ್ಮ ಮನವಿ ಇದೆ. ಉತ್ತರ ಕರ್ನಾಟಕ ಗ್ರಾಮ ವಾಸ್ತವ್ಯ ಮುಗಿದ ನಂತರ ಇತ್ತ ಬರುವ ಚಿಂತನೆ ಇದೆ ಎಂದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ದೇವೇಗೌಡರು ತಮ್ಮ ಅನುಭವದ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ. ಸರ್ಕಾರದಲ್ಲಿ ಸಮಸ್ಯೆ ಇದೆಯಾ ಎಂಬುದಾಗಿ ಸಮನ್ವಯ ಸಮಿತಿಯಲ್ಲಿ ಇರುವವರನ್ನು ಕೇಳಿ ಎಂದು ಪ್ರತಿಕ್ರಿಯಿಸಿದರು.

Translate »