ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
ಚಾಮರಾಜನಗರ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

January 29, 2019

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆ ಜೊತೆ ಅನಾಗರೀಕರಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದ ರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರುಣಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕುಂದುಕೊರತೆ ಸಭೆಯೊಂದರಲ್ಲಿ ತಮ್ಮನ್ನು ಪ್ರಶ್ನಿಸಿದ ಮಹಿಳೆ ಜೊತೆ ಸಿದ್ದರಾಮಯ್ಯ ಅವರು ಅಸಭ್ಯವಾಗಿ ಹಾಗೂ ಅನಾಗರೀಕರಾಗಿ ವರ್ತಿಸಿದ್ದಾರೆ. ಆಕೆಯ ಕೈಯಿಂದ ಮೈಕ್ ಅನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅಗೌರವ ತೋರಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಸಿದ್ದರಾಮಯ್ಯ ಅವರು ಈ ಕೂಡಲೇ ಮಹಿಳೆಯರ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ನಿರಂತರವಾಗಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಗರಸಭಾ ಸದಸ್ಯರಾದ ಮಂಜುನಾಥ್, ಮನೋಜ್ ಪಟೇಲ್, ಶಿವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ನಾಗೇಂದ್ರಸ್ವಾಮಿ, ಸಿ.ಎಂ. ಶಿವರಾಜ್, ನಗರ ಘಟಕ ಅಧ್ಯಕ್ಷ ಸುಂದರರಾಜ್, ಮುಖಂಡರಾದ ಪುರುಷೋತ್ತಮ್, ಪೃಥ್ವಿರಾಜ್, ಚಂದ್ರಶೇಖರ್, ಕೂಸಣ್ಣ, ನಂಜುಂಡನಾಯ್ಕ, ಶಿವಕುಮಾರ್, ಶಿವಣ್ಣ, ಶೈಲೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »