ಯಾವುದೇ ಸಂದರ್ಭ ವಿಧಾನಸಭೆ ಚುನಾವಣೆ
ಮೈಸೂರು

ಯಾವುದೇ ಸಂದರ್ಭ ವಿಧಾನಸಭೆ ಚುನಾವಣೆ

June 6, 2019

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು. ಲೋಕಸಭೆ ಚುನಾವಣೆಯಲ್ಲಿ ಗೆದ್ದಂತೆ ಅಭೂತಪೂರ್ವ ಗೆಲುವು ಸಾಧಿಸಲು ಇಂದಿನಿಂದಲೇ ಸಜ್ಜಾಗ ಬೇಕೆಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಕರೆ ನೀಡಿದರು.

ಅರಮನೆ ಮೈದಾನದಲ್ಲಿ ಪಕ್ಷದ ವತಿ ಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸಚಿ ವರು ಮತ್ತು ನೂತನ ಸಂಸದರ ಅಭಿ ನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ಮೈತ್ರಿ ಸರ್ಕಾರದ ಬೆಳ ವಣಿಗೆ, ಜೆಡಿಎಸ್, ಕಾಂಗ್ರೆಸ್ ಮುಖಂಡರ ಒಳ ಜಗಳ ಈ ಸರ್ಕಾರ ಹೆಚ್ಚು ಕಾಲ ಇರು ವುದಿಲ್ಲ ಎಂಬುದನ್ನು ಸಾರಿ ಸಾರಿ ಹೇಳು ತ್ತಿದೆ ಎಂದರು.

ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಸನ್ಯಾಸ ತೆಗೆದುಕೊಳ್ಳು ವುದು ಒಳಿತು ಎಂದು ಮುರಳೀಧರರಾವ್ ಹೇಳಿದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುವ ಕನಸು ಕಟ್ಟಿಕೊಂಡಿದ್ದರು. ಆದರೆ ಅದನ್ನು ಜನತೆ ತಿರಸ್ಕರಿಸಿದ್ದಾರೆ, ಸನ್ಯಾಸಿಯಾಗಬೇಕಿದ್ದ ವರು ದೇಶದ ಪ್ರಧಾನಿಯಾಗಿದ್ದಾರೆ, ಪ್ರಧಾನಿ ಆಗುವ ಕನಸು ಕಾಣುತ್ತಿದ್ದವರು ಸನ್ಯಾಸ ಸ್ವೀಕರಿಸಲಿ, ಈಗ ರಾಹುಲ್ ಗಾಂಧಿ ಅವರಿಗೆ ಯಾವುದೇ ಕೆಲಸ ಇಲ್ಲ. ಐದು ವರ್ಷಗಳ ಕಾಲ ನಿರಾತಂಕವಾಗಿ ನಿದ್ದೆ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

125 ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷ ಕಳೆದ ಲೋಕಸಭಾ ಚುನಾ ವಣೆಯಲ್ಲಿ ಮತ್ತು ಇತ್ತೀಚೆಗೆ ತಾನೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲೂ ವಿರೋಧ ಪಕ್ಷದ ಸ್ಥಾನ ಗಳಿಸಲು ಬೇಕಾದ ಸಂಖ್ಯಾ ಬಲ ಗಳಿಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬು ದಕ್ಕೆ ಇದಕ್ಕಿಂತ ಬೇರೆ ನಿದರ್ಶನ ಬೇಕಿಲ್ಲ ಎಂದು ಅವರು ಹೇಳಿದರು.ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರದಲ್ಲಿ ನಾವು ದಲಿತ ರನ್ನು ಸಚಿವರನ್ನಾಗಿ ಮಾಡಿಯೇ ಮಾಡು ತ್ತೇವೆ. ತಾಕತ್ತಿದ್ದರೆ ನೀವು ರಾಜ್ಯದಲ್ಲಿ ಅದೇ ಸಮುದಾಯದವರನ್ನು ಮುಖ್ಯಮಂತ್ರಿಯ ನ್ನಾಗಿ ಮಾಡಿ ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಕೇಂದ್ರದಲ್ಲಿ ಸಚಿವ ಸಂಪುಟ ರಚನೆಯಾಗುವ ವೇಳೆ ನಾನು ಮತ್ತು ಸದಾನಂದಗೌಡರು ಪ್ರಧಾನಿ ನರೇಂದ್ರ ಮೋದಿಯ ವರನ್ನು ಭೇಟಿಯಾಗಿ ಕೇಂದ್ರದಲ್ಲಿ ದಲಿತ ಸಮುದಾಯದವ ರೊಬ್ಬರನ್ನು ಸಚಿವರನ್ನಾಗಿ ಮಾಡುವಂತೆ ಕೇಳಿಕೊಂಡಿದ್ದೆವು. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದು ತಿಳಿಸಿದರು. ನಾವು ಕೇಂದ್ರದಲ್ಲಿ ದಲಿತರನ್ನು ಮಂತ್ರಿ ಮಾಡುತ್ತೇವೆ. ನೀವು ದಲಿತ ರನ್ನು ಮುಖ್ಯಮಂತ್ರಿ ಮಾಡುತ್ತೀರಾ? ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಪ್ರಶ್ನಿಸಿದರು. ಮಹಾನ್ ನಾಯಕರೊಬ್ಬರು ಬಿಜೆಪಿಯವರು ದಲಿತ ವಿರೋಧಿಗಳೆಂದು ಆರೋಪ ಮಾಡುತ್ತಿದ್ದರು. ರಾಜ್ಯದ ಐದು ಪರಿಶಿಷ್ಟ ಜಾತಿ, ಎರಡು ಪರಿಶಿಷ್ಟ ವರ್ಗ ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವೆ. ಇಂತಹವರಿಂದ ನಾವು ಪಾಠ ಹೇಳಿಸಿಕೊಳ್ಳಬೇಕೆ? ಎಂದು ಪ್ರಶ್ನೆ ಮಾಡಿದರು.

ಯಾವುದೇ ಕಾರಣಕ್ಕೂ ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿಗೆ 3667 ಎಕರೆ ಜಮೀನು ಕೊಡಲು ಅವಕಾಶ ನೀಡುವುದಿಲ್ಲ. ಪಕ್ಷದ ವತಿಯಿಂದ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಘೋಷಿಸಿದರು. ಕೇಂದ್ರ ಸಚಿವರಾದ ಸದಾನಂದ ಗೌಡ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಷಿ ಮತ್ತಿತರರು ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಅವಕಾಶ ಕೊಡಬಾರದು. ಸಾಧ್ಯವಾದರೆ ಪ್ರಧಾನಿಯವರ ಗಮನಕ್ಕೂ ತರಬೇಕೆಂದು ಸಲಹೆ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದ ಬಗ್ಗೆ ನಮ್ಮದೇನೂ ತಕರಾರಿಲ್ಲ. ಹಿಂದೆ ಗ್ರಾಮ ವಾಸ್ತವ್ಯ ಮಾಡಿ ದ್ದಾಗ ಆ ಗ್ರಾಮಗಳಿಗೆ ಒಂದೊಂದು ಕೋಟಿ ವಿಶೇಷ ಅನುದಾನ ಕೊಡುವುದಾಗಿ ವಾಗ್ದಾನ ಮಾಡಿದ್ದರು. ಈಗ ಗ್ರಾಮಗಳ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ಗೊತ್ತೆ ಎಂದು ಪ್ರಶ್ನಿಸಿದರು. ಮೊದಲು ಇಂತಹ ರಾಜಕೀಯ ದೊಂಬರಾಟ ನಿಲ್ಲಿಸಿ, ಬರಪೀಡಿತ ಪ್ರದೇಶಗಳಿಗೆ ಕೂಡಲೇ ಭೇಟಿ ಕೊಡಿ, ಲೋಕಸಭೆ ಚುನಾವಣೆಯಲ್ಲಿ ಉಂಟಾದ ಸೋಲನ್ನು ಮರೆಯಲು ನಾಟಕವಾಡುತ್ತಿದ್ದಾರೆ. ಒಂದು ವರ್ಷದಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ನೆಲೆಸಿದ್ದವರಿಗೆ ಆಗ ಜನರ ನೆನಪಿರಲಿಲ್ಲವೇ.

Translate »