ಬೆಂಗಳೂರು, ಜು.30(ಕೆಎಂಶಿ)- ಭಾರೀ ವಿವಾದ ಎಬ್ಬಿ ಸಿದ್ದ ಹಜರತ್ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ರದ್ದು ಪಡಿಸಿದೆ. ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ನಿನ್ನೆ ಸಂಜೆ ಅಧಿಕಾರಿ ಗಳೊಂದಿಗೆ ನಡೆಸಿದ ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳಲ್ಲಿ ಇದು ಒಂದಾಗಿದೆ. ಈ ಸಂಬಂಧ ಅಧಿಕೃತ ಆದೇಶ ಪ್ರಕಟವಾಗಿದ್ದು ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಚರಿಸು ತ್ತಿದ್ದ ಹಜರತ್ ಟಿಪ್ಪು ಜಯಂತಿಯನ್ನು ನಿಲ್ಲಿಸಲಾಗಿದೆ. 2014ರಲ್ಲಿ ಅಂದಿನ ಸರ್ಕಾರ ಹಜರತ್ ಟಿಪ್ಪು ಜಯಂತಿಯನ್ನು ಪ್ರತಿ ವರ್ಷದ ನವೆಂಬರ್ 10ರಂದು ಸರ್ಕಾ ರದ ವತಿಯಿಂದಲೇ ಆಚರಿಸಲು ನಿರ್ಧ ರಿಸಿತ್ತು. ಆದರೆ ಇದರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆದು ಕಾನೂನು ಸುವ್ಯ ವಸ್ಥೆ ಹದಗೆಡಲು ಕಾರಣವಾಗಿತ್ತು.
ಅದರಲ್ಲೂ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಗಲಭೆಗಳು ನಡೆದು, ಅಪಾರ ಪ್ರಮಾ ಣದ ಖಾಸಗಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳು ಹಾನಿಯಾಗಿತ್ತು. ಈ ಹಿನ್ನೆಲೆ ಯಲ್ಲಿ ತಕ್ಷಣವೇ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದುಪಡಿಸಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಮನವಿ ಮಾಡಿದ್ದರು.