ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ಸಮಯದಲ್ಲಿ ಬದ ಲಾವಣೆ ಮಾಡಿದ್ದು, ಉತ್ತರ ಕರ್ನಾ ಟಕ ಜಿಲ್ಲೆಗಳ ಪ್ರಯಾಣಿಕರಿಗೆ ಅನು ಕೂಲ ಮಾಡಿಕೊಡಲಾಗಿದೆ.
ಈ ಹಿಂದೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ಒಳಗಾಗಿ ಸಂಚಾರವನ್ನು ಮುಕ್ತಾಯ ಮಾಡಲಾಗುತ್ತಿತ್ತು. ಈ ಆದೇಶವನ್ನು ಗುರುವಾರದಿಂದ ಮಾರ್ಪ ಡಿಸಲಾಗಿದೆ. ಕೊನೆಯ ಬಸ್ಸು ಸಂಜೆ 7 ಗಂಟೆಗೆ ಕೆಂಪೇಗೌಡ ಬಸ್ ನಿಲ್ದಾಣ ವನ್ನು ಬಿಡಲಿದ್ದು, ಇದರಿಂದ ದೂರದ ಉತ್ತರ ಕರ್ನಾಟಕದ ನಗರಗಳನ್ನು ತಲುಪಲು ಸಹಕಾರಿಯಾಗಲಿದೆ. ಕಲ ಬುರಗಿ, ಬೀದರ್ ನಗರಗಳ ಬಸ್ಗಳು ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ ತಲುಪ ಲಿವೆ. ಇದು ಎಲ್ಲಾ ಸ್ಥಳಗಳಿಗೆ ಕಾರ್ಯಾ ಚರಣೆಯಾಗುವ ಬಸ್ಸುಗಳಿಗೂ ಅನ್ವ ಯಿಸುತ್ತದೆ.
ಇದೇ ಮಾದರಿಯ ಬಸ್ಸುಗಳ ಕಾರ್ಯಾಚರಣೆಯ ಮುಂದಿನ ಆದೇಶದವರೆಗೂ ಮುಂದುವರೆಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಪ್ರಯಾಣಿಕರು ಮುಂಗಡ ಟಿಕೆಟು ಕಾಯ್ದಿರಿಸಲು ಕೋರಿದ್ದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಕಲಬುರ್ಗಿ, ಹುಬ್ಬಳ್ಳಿ, ಹೊಸಪೇಟೆ, ಹಾವೇರಿ, ಹರಪ್ಪನಹಳ್ಳಿ, ಕೊಪ್ಪಳ, ಕಾರವಾರ, ಮಂಗಳೂರು, ಮಡಿಕೇರಿ, ಮೈಸೂರು, ರಾಯಚೂರು, ಶಿವಮೊಗ್ಗ, ಶಿರಸಿ, ವಿಜಯಪುರ, ಉಡುಪಿ, ಯಾದಗಿರಿ. ಬೆಳಗಾವಿ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಕಲಬುರ್ಗಿ, ಗಂಗಾವತಿ, ಹುಬ್ಬಳ್ಳಿ, ಹಡಗಲಿ, ಹರಿಹರ, ಹೊಸಪೇಟೆ, ಕಂಪ್ಲಿ, ಕುಂದಾಪುರ, ಕುಮಟಾ, ಕೊಪ್ಪಳ, ಕುಷ್ಠಗಿ, ಮಂಗಳೂರು, ಮಡಿಕೇರಿ, ಮೈಸೂರು, ವಿಜಯಪುರ, ಸಂಡೂರು, ಶಿವಮೊಗ್ಗ, ಶಿರಗುಪ್ಪ, ಶಿರಸಿ, ಉಡುಪಿ, ಯಾದಗಿರಿ, ಯಲಬುರ್ಗ, ಯಲ್ಲಾಪುರ ದಿಂದ ಬೆಂಗಳೂರಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಕೆ.ಎಸ್.ಆರ್.ಟಿ.ಸಿ. ವೆಬ್ಸೈಟ್ ತಿತಿತಿ.ಞsಡಿಣಛಿ.iಟಿ ಮೂಲಕ ಅಥವಾ ನಿಗಮದ ಟಿಕೆಟು ಕೌಂಟರುಗಳು, ಫ್ರಾಂಚೈಸಿ ಕೌಂಟರುಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.