ಬೆಂಗಳೂರು: ದೇಶದ್ರೋಹಿ, ಮತಾಂಧ ಉಗ್ರಗಾಮಿಗಳ ಹುಟ್ಟಡ ಗಿಸಿ, ಕಾಶ್ಮೀರ ರಕ್ಷಿಸಿ, ಭಾರತದ ಸಾರ್ವಭೌಮತೆ, ಬಲಿಷ್ಠತೆಯನ್ನು ಸಾರಿದ ಬಿಜೆಪಿ ಬದ್ಧತೆ, ಸಾಮಥ್ರ್ಯ ಏನೆಂಬುದು ಜನತೆಗೆ ತಿಳಿದಿದೆ ಎಂದು ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ರಾಜಕೀಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ನಿಮ್ಮ ಕಾಂಗ್ರೆಸ್ನ ಅಂಗಸಂಸ್ಥೆಗಳೇ ಆಗಿರುವ ಪಿಎಎಫ್, ಐಎಎಸ್ಡಿಪಿಐ ಸಂಘಟನೆಗಳಿಗೆ ಮುಕ್ತಿ ಹಾಡುವ ಕಾಲ ಶೀಘ್ರದಲ್ಲೇ ಬರಲಿದೆ, ನೋಡುತ್ತೀರಿ ಎಂದೂ ಟ್ವೀಟ್ ಮಾಡಿದ್ದಾರೆ. ಸಂಘಟನೆ ಗಳ ಪೆÇೀಷಣೆ ಕಾಂಗ್ರೆಸ್ನ ಹೊಣೆ’ ಎಂಬಂತೆ ಅವುಗಳ ಮೇಲಿದ್ದ ಕ್ರಿಮಿನಲ್ ಕೇಸ್ಗಳನ್ನು ನಿಮ್ಮ ಅಧಿಕಾರವಧಿಯಲ್ಲಿ ವಾಪಸ್ಸು ಪಡೆದು ಕೊಂಡಿರಿ. ಈ ಪಾಪ ಕಾರ್ಯಕ್ಕೆ ರಾಜ್ಯದ ಜನತೆ ನಿಮಗೆ ತಕ್ಕ ಪಾಠ ಕಲಿಸಿದ್ದನ್ನು ನೀವು ಮರೆತಂತೆ ಕಾಣುತ್ತದೆ. ಎಲ್ಲವನ್ನೂ ರಾಜಕೀಯದ ಹಳದಿ ಕಣ್ಣಿನಿಂದ ನೋಡಬೇಡಿ ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.