ಡಾ.ಅಂಬೇಡ್ಕರ್ ವಿಚಾರಧಾರೆ ಅನುಸರಿಸಲು ಕರೆ
ಕೊಡಗು

ಡಾ.ಅಂಬೇಡ್ಕರ್ ವಿಚಾರಧಾರೆ ಅನುಸರಿಸಲು ಕರೆ

July 2, 2018

ಮಡಿಕೇರಿ:  ಸಂವಿಧಾನವನ್ನು ರಚಿಸುವ ಮೂಲಕ ಸಮಾನತೆಯ ಆದರ್ಶಗಳನ್ನು ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಸರಿಸುವ ಮನೋಸ್ಥಿತಿಯನ್ನು ಪ್ರತಿ ಯೊಬ್ಬರು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಕರೆ ನೀಡಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮದಿನಾಚರಣೆ, ವೃದ್ಧಾಶ್ರಮದ ಬಂಧು ಗಳಿಗೆ ವಸ್ತ್ರ ವಿತರಣೆ ಹಾಗೂ ದಲಿತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಮಡಿ ಕೇರಿಯಲ್ಲಿ ನಡೆಯಿತು.

ಡಾ.ಅಂಬೇಡ್ಕರ್ ಅವರು ಸಂವಿಧಾನ ವನ್ನು ರಚನೆ ಮಾಡುವುದರ ಮೂಲಕ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಸಮು ದಾಯಗಳು ಎಲ್ಲಾ ರಂಗಗಳಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಿದ್ದಾರೆ. ಪ್ರತಿಯೊ ಬ್ಬರೂ ಡಾ.ಅಂಬೇಡ್ಕರ್ ಅವರ ಆಶಯ ಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಶೋಷಿತ ವರ್ಗದವರನ್ನು ಗುರುತಿಸಿ ಮೇಲ ಕ್ಕೆತ್ತಲು ಸಂವಿಧಾನದಲ್ಲಿ ಅವಕಾಶ ಕಲ್ಪಿ ಸಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿ ಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ವಾಗಿದೆ ಎಂದು ಪಿ.ರಾಜೇಂದ್ರಪ್ರಸಾದ್ ಕಿವಿಮಾತು ಹೇಳಿದರು.

ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾ ಧಿಕಾರಿ ಡಾ.ಎಚ್.ವಿ.ದೇವದಾಸ್ ಮಾತ ನಾಡಿ, ರಾಷ್ಟ್ರ ಕಂಡ ಅಪ್ರತಿಮ ಪ್ರಗತಿಪರ ಚಿಂತಕ, ಸಮಾಜ ಸುಧಾರಕ, ಲೇಖಕ, ಸಾಮಾಜಿಕ ನ್ಯಾಯದ ಪ್ರತಿಪಾದಕ ಡಾ.ಅಂಬೇ ಡ್ಕರ್ ಬಹುಮುಖಿ ಪ್ರತಿಭೆ ಹೊಂದಿದ್ದರು ಎಂದರು. ಡಾ.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಆದರ್ಶವಾಗಿಟ್ಟು ಕೊಂಡು ಇಂದಿನ ಯುವ ಜನತೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಿವೈಎಸ್‍ಪಿ ಸುಂದರರಾಜ್ ಮಾತ ನಾಡಿ, `ಗ್ರಾಮೀಣರಿಗೆ ಸರ್ಕಾರ ನೀಡುವ ಯೋಜನೆಗಳನ್ನು ತಲುಪಿಸಿದಾಗ ಮಾತ್ರ ಡಾ.ಅಂಬೇಡ್ಕರ್ ಅವರ ಆಶಯಗಳು ಈಡೇರಲು ಸಾಧ್ಯವೆಂದರು. ಉತ್ತಮ ಸಮಾಜ ನಿರ್ಮಾಣ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಎಚ್.ವಿ. ದೇವದಾಸ್ ಅವರಿಗೆ “ಕೊಡಗು ದಲಿತ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭ ಜಿಲ್ಲೆಯ ಶ್ರೀಶಕ್ತಿ ವೃದ್ಧಾಶ್ರಮದ ಬಂಧುಗಳಿಗೆ ವಸ್ತ್ರ ವಿತರಣೆ ಮಾಡಲಾಯಿತು.

ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್, ಮಡಿಕೇರಿ ಡಾ.ಅಂಬೇಡ್ಕರ್ ಭವನದ ಅಧ್ಯಕ್ಷ ಎಚ್.ಎಂ.ನಂದಕುಮಾರ್, ಪ್ರಬುದ್ಧ ನೌಕರರ ಒಕ್ಕೂಟದ ಅಧ್ಯಕ್ಷ ಡಾ.ವಿ. ಎಸ್.ಸತೀಶ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರ ಭದ್ರಯ್ಯ, ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ಎಚ್.ಎಲ್. ಕುಮಾರ್ ಮತ್ತಿ ತರ ಪ್ರಮುಖರು ಉಪಸ್ಥಿತರಿದ್ದರು.

Translate »