ಏ.8ರಿಂದ ಮೈಸೂರಲ್ಲಿ  ಮೈತ್ರಿ ಅಭ್ಯರ್ಥಿ ಪರ ಪ್ರಚಾರ
ಮೈಸೂರು

ಏ.8ರಿಂದ ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ

April 3, 2019

ಮೈಸೂರು: -ಏಪ್ರಿಲ್ 8ರಿಂದ ಮೈಸೂರು-ಚಾಮರಾಜ ನಗರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಎರಡೂ ಪಕ್ಷಗಳ ಮುಖಂಡರುಗಳೊಂದಿಗೆ ಪ್ರಚಾರ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದ ಅವರು ದೂರವಾಣಿ ಮೂಲಕ ತಮ್ಮನ್ನು ಸಂಪರ್ಕಿಸಿದ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿಸಿದರು. ನಿನ್ನೆ (ಸೋಮವಾರ) ತಡ ರಾತ್ರಿವರೆಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಡಿ, ಸುದೀರ್ಘ ಮಾತುಕತೆ ನಡೆಸಿದರು.

ನಮ್ಮ ಪಕ್ಷದ ಹಿರಿಯ ನಾಯಕರೂ ಈಗಾಗಲೇ ಬೆಂಗಳೂರು ಸಮಾವೇಶ ದಲ್ಲಿ ಹೇಳಿರುವಂತೆ ತಾವು ಮೈತ್ರಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಏಪ್ರಿಲ್ 7ರಂದು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರೆಲ್ಲರೂ ಸೇರಿ ಮೈಸೂ ರಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸುತ್ತೇವೆ. ಏಪ್ರಿಲ್ 8ರಿಂದ ಪ್ರಚಾರ ನಡೆಸಿ ಅಭ್ಯರ್ಥಿಗಳನ್ನು ಗೆಲ್ಲಿಸು ತ್ತೇವೆ ಎಂದು ಜಿಟಿಡಿ ನುಡಿದರು. ಇಂದಿನಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವು ದಾಗಿಯೂ ಅವರು ತಿಳಿಸಿದರು.

Translate »