ಎಂಇಎಸ್ ಪುಂಡಾಟಿಕೆ ಸಹಿಸಲು ಸಾಧ್ಯವೇ ಇಲ್ಲ
News

ಎಂಇಎಸ್ ಪುಂಡಾಟಿಕೆ ಸಹಿಸಲು ಸಾಧ್ಯವೇ ಇಲ್ಲ

December 21, 2021

ಬೆಂಗಳೂರು, ಡಿ. 20(ಕೆಎಂಶಿ)- ಮಹಾರಾಷ್ಟ್ರ ಏಕೀ ಕರಣ ಸಮಿತಿಯ ಪುಂಡಾಟಿಕೆಯನ್ನು ಕನ್ನಡಿಗರು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಉದಾರತೆಯನ್ನು ಪದೇ ಪದೆ ದುರುಪ ಯೋಗಪಡಿಸಿಕೊಳ್ಳುವ ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಕುರಿತು ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಘಟನೆ ಸಂಬಂಧ ಖಂಡನಾ ನಿರ್ಣಯ ಅಂಗೀಕರಿಸುವಂತೆ ಆಗ್ರಹಿಸಿದ್ದಾರೆ. ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹಾರಾಜರ ಪ್ರತಿಮೆ ವಿರೂಪ ಗೊಳಿಸಿದ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವ ಘಟನೆಗೆ ಸಂಬಂಧಿ ಸಿದಂತೆ ಸಿದ್ದರಾಮಯ್ಯ ಅವರು ಇಂದು ವಿಧಾನಭೆಯಲ್ಲಿ ಸರ್ಕಾರದ ಗಮನ ಸೆಳೆದು, ಮಾತನಾಡಿದರು. ಕನ್ನಡದ ಧ್ವಜ ಕನ್ನಡಿಗರ ಹೆಮ್ಮೆ. ಆ ಧ್ವಜವನ್ನು ಕಿಡಿ ಗೇಡಿಗಳು ಮಹಾರಾಷ್ಟ್ರದಲ್ಲಿ ಸುಟ್ಟು ಹಾಕಿ ಅಗೌರವ ತೋರಿಸಿದ್ದಾರೆ. ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಇಡೀ ದೇಶದ ಆಸ್ತಿ. ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಆರೂವರೆ ಕೋಟಿ ಕನ್ನಡಿಗರು ಸೇರಿದಂತೆ ಇಡೀ ದೇಶಕ್ಕೆ ಮಾಡಿರುವ ಅವಮಾನ. ಇದು ಪುಂಡು-ಪೆÇೀಕರಿಗಳಿಗೆ ಏಕೆ ಆರ್ಥ ವಾಗುತ್ತಿಲ್ಲವೋ ಗೊತ್ತಿಲ್ಲ. ಬೆಳಗಾವಿಯ ಅನಗೋಳದಲ್ಲಿ ರಾಯಣ್ಣ ಮತ್ತು ಬೆಂಗ ಳೂರಿನ ಸದಾಶಿವನಗರದಲ್ಲಿ ಶಿವಾಜಿ ಯವರ ಪ್ರತಿಮೆ ವಿರೂಪಗೊಳಿಸಲಾ ಗಿದೆ. ರಾಯಣ್ಣ, ಶಿವಾಜಿ, ಝಾನ್ಸಿರಾಣಿ ಲಕ್ಷ್ಮಿಬಾಯಿ ಈ
ಎಲ್ಲರೂ ದೇಶಕ್ಕಾಗಿ ಹೋರಾಟ ಮಾಡಿದವರು. ಅಂತಹವರ ಪ್ರತಿಮೆಯನ್ನು ವಿರೂಪಗೊಳಿಸುವ ಕಿಡಿಗೇಡಿಗಳು ಬುದ್ಧಿಗೇಡಿಗಳು, ಚಾರಿತ್ರ್ಯ ಹೀನರು, ಅವಿವೇಕಿಗಳು. ಇಂತಹ ಸ್ವಾತಂತ್ರ್ಯ ಸೇನಾನಿಗಳಿಗೆ ಅವಮಾನ ಮಾಡಿದರೆ ಅದು ಇಡೀ ದೇಶಕ್ಕೆ ಮಾಡಿದ ಅವಮಾನ ಎಂಬುದು ಅವರಿಗೆ ಅರ್ಥವೇ ಆಗುತ್ತಿಲ್ಲ. ಅರ್ಥವಾಗುವಂತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು. ಪುಂಡು, ಪೆÇೀಕರಿಗಳನ್ನು ಗಡಿಪಾರು ಮಾಡಬೇಕು.
ಎಂಇಎಸ್ ನವರು ಪದೇ ಪದೆ ಕಾಲು ಕರೆದು ಜಗಳಕ್ಕೆ ಬರುತ್ತಿದ್ದಾರೆ. ಕನ್ನಡಿಗರು ಉದಾರಿಗಳು, ಸ್ವಾಭಿಮಾನಿಗಳು. ಅದನ್ನೇ ಅವರು ದೌರ್ಬಲ್ಯ ಎಂದು ಭಾವಿಸಿ ತಗಾದೆ ತೆಗೆಯುತ್ತಿದ್ದಾರೆ. ಹೀಗಾಗಿ ಎಂಎಎಸ್ ನಿಷೇಧಿಸುವ ಕುರಿತು ಗಂಭೀರ ಚಿಂತನೆ ನಡೆಸಬೇಕು. ಕಾನೂನಿನಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.

ಕನ್ನಡಿಗರ ಉದಾರತೆಯನ್ನು ದೌರ್ಬಲ್ಯ ಎಂದು ಭಾವಿಸಿರುವ ಎಂಇಎಸ್‍ನವರು ಮೂರ್ಖರು, ದುರಹಂಕಾರಿಗಳು. ಪುಂಡಾಟಿಕೆ ಮಾಡುವವರನ್ನು ಸರ್ಕಾರ ಬಲಿ ಹಾಕಬೇಕು. ಕನ್ನಡದ ನೆಲ, ಜಲ ಬೇಕು ಎನ್ನುವ ಈ ಪುಂಡರು ನಮ್ಮ ರಾಜ್ಯದಲ್ಲಿ ಇರಲು ಅರ್ಹರೇ ಅಲ್ಲ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಜೈಲಿಗೆ ಕಳುಹಿಸಬೇಕು. ಎಲ್ಲ ಪಕ್ಷಗಳು ಒಂದಾಗಿ ಕನ್ನಡ ನಾಡು ಉಳಿಸುವ ಕೆಲಸ ಮಾಡಬೇಕು. ರಾಯಣ್ಣ ಮತ್ತು ಶಿವಾಜಿಯವರ ಪ್ರತಿಮೆಗೆ ಅವಮಾನ ಮಾಡಿದವರು ಯಾರೇ ಆಗಿರಲಿ, ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂಥ ನೀಚ ಕೆಲಸ ಮಾಡುವುದರಲ್ಲಿ ಎಂಇಎಸ್‍ನವರು ನಿಸ್ಸೀಮರು. ಪದೇ ಪದೆ ಕಿತಾಪತಿ ಮಾಡುವ, ಶಾಂತಿ ಕದಡುವುದು ಅವರ ಕೆಲಸ. ಇದನ್ನು ಇನ್ನು ಕನ್ನಡಿಗರು ಸಹಿಸಲು ಸಾಧ್ಯವೇ ಇಲ್ಲ. ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಬೇಕು ಎಂದು ಸಿದ್ದರಾಮಯ್ಯ ಇದೇ ವೇಳೆ ಒತ್ತಾಯಿಸಿದ್ದಾರೆ.

Translate »