ಗುಂಡ್ಲುಪೇಟೆ: ‘ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯಿಟ್ಟು ಸತತ ಸಾಧನೆ ಮಾಡಿದರೆ ಉನ್ನತ ಸ್ಥಾನಗಳಿ ಸಲು ಸಾಧ್ಯವಾಗುತ್ತದೆ’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ಮೇರು ವಿದ್ಯಾ ಸಂಸ್ಥೆ ಹಾಗೂ ಸಂಕಲ್ಪ ಶಿಕ್ಷಕರ ವೇದಿಕೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಂಪನ್ಮೂಲವಿಲ್ಲದ ತಾಲೂ ಕಿನ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ದೊಡ್ಡ ಕನಸನ್ನು ಕಾಣುವ ಮೂಲಕ ಉನ್ನತ ಗುರಿ ತಲುಪಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಹಾಗೂ…
ಸಾಹಿತಿ ಎಂ.ಎನ್.ವ್ಯಾಸರಾವ್ಗೆ ನುಡಿನಮನ
July 23, 2018ಯಳಂದೂರು: ‘ಎಂ.ಎನ್.ವ್ಯಾಸರಾವ್ ಅವರು ತಮ್ಮ ದೈನಂ ದಿನ ಬರವಣಿಗೆ ಮತ್ತು ಕಥೆ, ಕವಿತೆ, ಸಾಹಿತ್ಯ ರಚನೆ ಮೂಲಕ ಮನುಷ್ಯ ಸಂಬಂಧವನ್ನು ಗಟ್ಟಿಗೊಳಿಸಿ ಯುವ ಪೀಳಿಗೆಯನ್ನು ಪ್ರೆರೇಪಿ ಸುವ ಕೆಲಸ ಮಾಡುತ್ತಿದ್ದರು. ಅವರ ನಿಧನ ಸಾಹಿತ್ಯ, ಸಿನಿಮಾ ಕ್ಷೇತ್ರಕ್ಕೆ ಅಪಾರ ನಷ್ಟವುಂಟು ಮಾಡಿದೆ’ ಎಂದು ತಾಲೂಕು ಕಸಾಪ ಅಧ್ಯಕ್ಷ ಮದ್ದೂರು ವಿರೂಪಾಕ್ಷ ಹೇಳಿದರು. ಪಟ್ಟಣದ ಲಯನ್ಸ್ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿಪ ್ರಸಮಾಜ ದಿಂದ ನಡೆದ ಚಿತ್ರರಂಗ ಗೀತಾ ರಚನಾ ಕಾರ ಹಾಗೂ ಸಾಹಿತಿ…
ಅಂಗವಿಕಲರಿಗೆ ಸೌಲಭ್ಯ ತಲುಪಿಸಲು ಸಲಹೆ
July 23, 2018ಚಾಮರಾಜನಗರ: ‘ಸೇವಾ ಸಂಸ್ಥೆಗಳು ಸಂವಿಧಾನದ ಉದೇಶಗಳನ್ನು ಈಡೇರಿಸುವ ಜೊತೆಗೆ, ಸರ್ಕಾರದ ಸೌಲ ಭ್ಯವನ್ನು ಅಂಗವಿಕಲರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜು ಸಲಹೆ ನೀಡಿದರು. ನಗರದ ಸೇವಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರ ಹಾಗೂ ಜಿಲ್ಲಾ ವಕಿಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸೇವಾ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಕಲಚೇತನ ಮಕ್ಕಳ ಹಕ್ಕುಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು….
ಬಡ್ತಿ ಮೀಸಲಾತಿ ಕಾಯ್ದೆ-2017 ಜಾರಿಗೆ ಆಗ್ರಹ : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
July 22, 2018ಚಾಮರಾಜನಗರ: ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ-2017 ಅನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಶನಿವಾರ ಕರ್ನಾ ಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕ ರರ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ಸಮಾ ವೇಶಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಬಳಿಕ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯಿತ್ರಿ…
ವಿದ್ಯಾರ್ಥಿನಿಲಯಗಳಿಗೆ ಸಚಿವರ ಭೇಟಿ, ಪರಿಶೀಲನೆ
July 22, 2018ಚಾಮರಾಜನಗರ: ನಗರದಲ್ಲಿ ರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತ ರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ನಗರದ ಮಹದೇಶ್ವರ ಕಾಲೋನಿ ಬಳಿ ಯಿರುವ ವಿದ್ಯಾರ್ಥಿ ನಿಲಯಕ್ಕೆ ಬೆಳಿಗ್ಗೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿದರು. ಬಳಿಕ, ಅಡುಗೆ ಮನೆ ದಾಸ್ತಾನು, ಕಂಪ್ಯೂಟರ್ ಕೊಠಡಿ, ಹಾಜರಾತಿ, ಶೌಚಾ ಲಯದ ಸ್ವಚ್ಛತೆ, ಮಲಗುವ…
ಸ್ವಾರ್ಥ ಬಿಟ್ಟು ಸೇವೆ ಸಲ್ಲಿಸುವುದೇ ಲಯನ್ಸ್ ಗುರಿ
July 22, 2018ಚಾಮರಾಜನಗರ: ‘ಸ್ವಾರ್ಥವನ್ನು ಬಿಟ್ಟು ಸಂಕಷ್ಟದಲ್ಲಿರುವವರಿಗೆ ಸೇವೆ ಮಾಡು ವುದೇ ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶ ವಾಗಿದೆ’ ಎಂದು ಮೊದಲನೇ ಉಪ ರಾಜ್ಯಪಾಲ ಲಯನ್ ನಾಗರಾಜ್ ವಿ.ಬೈರಿ ಹೇಳಿದರು. ನಗರದ ರತ್ನೇಶ್ವರಿ ರೆಸಿಡೆನ್ಸಿ ಹಾಲ್ನಲ್ಲಿ ನಡೆದ ಚಾಮರಾಜನಗರ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದವಿ ಪ್ರದಾನ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದವಿ ಪ್ರಮಾಣ ವಿತರಿಸಿ ಅವರು ಮಾತನಾಡಿದರು. ಲಯನ್ಸ್ ಸಂಸ್ಥೆಯು ಅಂತಾ ರಾಷ್ಟ್ರೀಯ ಮಟ್ಟದಲ್ಲಿ 200ಕ್ಕೂ ಹೆಚ್ಚು ಶಾಖೆ ಯನ್ನು ಹೊಂದಿದ್ದು, ಸೇವೆ ಮಾಡುತ್ತಿದೆ. ಆರೋಗ್ಯ, ಪರಿಸರ ಸರಂಕ್ಷಣೆ,…
ಪರಿಶಿಷ್ಟರ ಕಲ್ಯಾಣ ಯೋಜನೆ ಪ್ರಗತಿಗೆ ಡಿಸಿ ತಾಕೀತು
July 22, 2018ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಯಡಿ ಬಿಡುಗಡೆಯಾಗುವ ಅನುದಾನ ವನ್ನು ಶೇ.100ರಷ್ಟು ಬಳಕೆ ಮಾಡಿ ಆಯಾ ಜಾತಿ ವರ್ಗದ ಜನತೆಯ ಕಲ್ಯಾಣಕ್ಕೆ ವಿನಿ ಯೋಗಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಿ ರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿ ಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಇಲಾಖೆಗಳಿಗೆ ಆಯಾ ಕಾರ್ಯ ಕ್ರಮದ…
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ
July 22, 2018ಗುಂಡ್ಲುಪೇಟೆ: ಇಲ್ಲಿನ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಪಿ.ಸುರೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದೆ ಇದ್ದ ನಾಗರಾಜನಾಯ್ಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಯಲ್ಲಿ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಪಿ.ಸುರೇಂದ್ರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿ ಸಿದ ಸಹಕಾರ ಅಭಿವೃದ್ಧಿ ಅಧಿಕಾರಿ ರಶೀದ್ ಬೇಗ್ ಘೋಷಿಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಸುರೇಂದ್ರ…
ಆಷಾಢ ಮಾಸದ ಮೊದಲ ಶುಕ್ರವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ
July 21, 2018ಚಾಮರಾಜನಗರ: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಜಿಲ್ಲೆಯ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಸಾವಿರಾರು ಭಕ್ತರು ದೇವಸ್ಥಾನಗಳಿಗೆ ತೆರಳಿ ಭಕ್ತಿ ಸಮರ್ಪಿಸಿದರು. ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಮಲೆಮಹದೇಶ್ವರಸ್ವಾಮಿ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ, ವೀರಭದ್ರೇಶ್ವರ, ಕಾಳಿಕಾಂಬ ಹಾಗೂ ಆದಿಶಕ್ತಿ ದೇವಸ್ಥಾನ, ಸಂತೇ ಮರಹಳ್ಳಿಯ ಶ್ರೀ ಮಹದೇಶ್ವರ ದೇವಸ್ಥಾನ, ಕಂದಹಳ್ಳಿಯ ಶ್ರೀ ಮಹದೇಶ್ವರ ದೇವಾ ಲಯ ಸೇರಿದಂತೆ ಜಿಲ್ಲಾದ್ಯಂತ ಎಲ್ಲಾ ದೇವಾ…
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ: ಅನುತ್ತೀರ್ಣಗೊಂಡ ವಿದ್ಯಾರ್ಥಿ ನೇಣಿಗೆ ಶರಣು
July 21, 2018ಚಾಮರಾಜನಗರ, ಜು.20- ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿ ಸಿದ್ದಪ್ಪ ಎಂಬುವವರ ಮಗ ಅಕ್ಷಯ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ್ ಕಳೆದ ಮಾರ್ಚ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದನು. ನಂತರ ಇತ್ತೀಚೆಗೆ ನಡೆದ ಪೂರಕ ಪರೀಕ್ಷೆ ಬರೆದಿದ್ದ. ಗುರುವಾರ ಸಂಜೆ ಪೂರಕ ಫಲಿತಾಂಶ ಪ್ರಕಟಗೊಂಡಿತ್ತು. ಅದನ್ನು ನೋಡಿದ ಅಕ್ಷಯ್, ಆ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದನು….