ಚಾಮರಾಜನಗರ: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಜಾನಪದ ಅಧ್ಯಯನ ಹಾಗೂ ಜನಪದ ಕಲೆಗಳ ಕಲಿಕಾ ಕೇಂದ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಜರುಗುವ ಸರ್ಟಿಫಿಕೇಟ್ ಶಿಕ್ಷಣ ಕೋರ್ಸುಗಳಾದ ಬೀಸುಕಂಸಾಳೆ, ಡೊಳ್ಳು ಕುಣಿತ, ಗೀತಸಂಪ್ರದಾಯ, ಕಸೂತಿ ಕಲೆ, ಕೋರ್ಸ್ಗಳ ಪ್ರವೇಶಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥತೆ ಅರ್ಜಿ ನಮೂನೆ ಪ್ರವೇಶ ಶುಲ್ಕ ಹಾಗೂ ಮಾಹಿತಿಗಳನ್ನು ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾನಿಲಯದ ವೆಬ್ಸೈಟ್ www.janapadauni.in ನಲ್ಲಿ ಸಂಪರ್ಕಿಸಬಹುದು. ವಿವರಣಾ ಪುಸ್ತಕದ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ…
ರಂಗೂಪುರ ಪಿಎಸಿಸಿ ಬಿಜೆಪಿ ತೆಕ್ಕೆಗೆ
July 17, 2018ಬೇಗೂರು: ರಂಗೂ ಪುರ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಜಯ ಭೇರಿ ಬಾರಿಸಿದ್ದು, ಕಾಂಗ್ರೆಸ್ ಬೆಂಬಲಿ ಗರು ಎಲ್ಲಾ ಕ್ಷೇತ್ರಗಳಲ್ಲಿ ಸೋಲು ಕಂಡು ಭಾರೀ ಮುಖಭಂಗ ಅನುಭವಿಸಿದ್ದಾರೆ. ಬ್ಯಾಂಕ್ ಕಚೇರಿಯಲ್ಲಿ ನಡೆದ ಚುನಾವಣೆ ಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿ ಗರು ಗೆದ್ದರೆ, 12 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಬೆಂಬಲಿಗರು ಸೋಲು ಕಂಡಿದ್ದಾರೆ. ಬ್ಯಾಂಕ್ನ ಮಾಜಿ ಅಧ್ಯಕ್ಷ ಆರ್.ಎಸ್.ನಾಗರಾಜು, ಆರ್.ಎಸ್.ರಾಜು, ವೈ.ಎಚ್.ಸಿದ್ದನಾಯಕ, ಸಿದ್ದಯ್ಯ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆರ್.ಪಿ.ಲಿಂಗಣ್ಣ…
ಬುದ್ಧಿಮಾಂದ್ಯ ಶಾಲೆ ನೆರವು ನೀಡಿದ ಉದ್ಯಮಿ
July 17, 2018ಗುಂಡ್ಲುಪೇಟೆ: ಸರ್ಕಾರದ ಅನುದಾನವಿಲ್ಲದೆ ದಾನಿಗಳ ನೆರನಿಂದ ನಡೆಯುತ್ತಿರುವ ಪಟ್ಟಣದ ಬುದ್ದಿಮಾಂದ್ಯ ಮಕ್ಕಳ ಶಾಲೆಗೆ ಉದ್ಯಮಿ ಯೊಬ್ಬರು ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಕಳೆದ 9 ವರ್ಷಗಳಿಂದ ಪೃಥ್ವಿ ವುಮೆನ್ ಅಂಡ್ ರೂರಲ್ ಡೆವಲಪ್ಮೆಂಟ್ ಆರ್ಗ ನೈಜೇಷನ್ ವತಿಯಿಂದ ಪಟ್ಟಣದ ಅರಳೀ ಕಟ್ಟೆ ಬೀದಿಯಲ್ಲಿ ನಡೆಸುತ್ತಿರುವ ಬುದ್ಧಿ ಮಾಂದ್ಯ ಮಕ್ಕಳ ಈ ವಿಶೇಷ ಶಾಲೆಯಲ್ಲಿ ಮಕ್ಕಳು ಹಾಗೂ ವಯಸ್ಕರೂ ಸೇರಿದಂತೆ ಸುಮಾರು 27 ಜನರಿದ್ದಾರೆ. ಇದಕ್ಕೆ ಸರ್ಕಾರದ ವಿವಿಧ ಅಂಗ ಸಂಸ್ಥೆ ಗಳಿಂದ ನೆರವು ಪಡೆಯಲು ಸಾಹಸ ಮಾಡುತ್ತಿದ್ದರೂ…
ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾನೂನು ಅರಿವು ನೆರವು
July 17, 2018ಚಾಮರಾಜನಗರ: ಕಾನೂನು ಎಲ್ಲರಿಗೂ ಒಂದೇ 18 ವರ್ಷ ತುಂಬಿದ ಮೇಲೆ ವಾಹನ ಪರವಾನಿಗೆ ಪಡೆದು ವಿದ್ಯಾರ್ಥಿಗಳು ವಾಹನ ಓಡಿಸುವುದು ಉತ್ತಮ. ಪರವಾನಿಗೆ ಇಲ್ಲದೆ ವಾಹನ ಚಾಲಿಸು ವುದು ಅಪರಾಧ ಎಂದು ಚಾಮರಾಜ ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಂ. ವಿಶಾಲಕ್ಷಿ ತಿಳಿಸಿದರು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸರ್ಕಾರಿ ಪಾಲಿಟ್ನಿಕ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ವನ್ನು…
ಪ್ರವಾಹದಲ್ಲಿ ಕೊಚ್ಚಿ ಹೋದ ವೆಸ್ಲಿ ಸೇತುವೆ
July 17, 2018ಕೊಳ್ಳೇಗಾಲ: ತಾಲೂಕಿನ ಶಿವನ ಸಮುದ್ರಕ್ಕೆ ಸಂಪರ್ಕ ಕಲ್ಪಿಸಲು 200 ವರ್ಷಗಳ ಹಿಂದೆ ಬ್ರಿಟೀಷರ ಕಾಲದಲ್ಲಿ ನಿರ್ಮಿಸಲಾಗಿದ್ದ ವೆಸ್ಲಿ ಸೇತುವೆ ಸೋಮವಾರ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಮುಂಗಾರು ಹಂಗಾಮಿನಡಿ ರಾಜ್ಯ ದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳು ಭರ್ತಿ ಯಾಗುತ್ತಿದೆ. ಜೊತೆಗೆ, ನದಿಗಳು ಮೈದುಂಬಿ ಹರಿಯುತ್ತಿದೆ. ಕೆಆರ್ಎಸ್ ಜಲಾಶಯ ಈಗಾಗಲೇ ಗರಿಷ್ಠ ಮಟ್ಟ ತಲುಪಿದ್ದು, ಜಲಾ ಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಸೋಮವಾರ ಕೆಆರ್ಎಸ್ ಜಲಾಶಯ ದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ…
ಉಚಿತ ಬಸ್ಪಾಸ್ಗಾಗಿ ಬಿವಿಎಸ್ ಪ್ರತಿಭಟನೆ
July 17, 2018ಚಾಮರಾಜನಗರ: ಎಲ್ಲಾ ಸಮು ದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿಮಂದಿರ ಆವರಣದಲ್ಲಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್ ರಾಜ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘದ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಸತ್ತಿ ರಸ್ತೆ, ಸುಲ್ತಾನ್ ಷರೀಪ್ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಭುವನೇಶ್ವರ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಆವರಣಕ್ಕೆ…
ಯುವತಿಗೆ ಅಪಮಾನ ಪ್ರಕರಣ: ಚಾರ್ಜ್ಶೀಟ್ ಸಲ್ಲಿಕೆ ವಿಳಂಬ, ಯಳಂದೂರು ಠಾಣೆ ಪೊಲೀಸರ ವಿರುದ್ಧ ಆರೋಪ
July 17, 2018ಕೊಳ್ಳೇಗಾಲ: ಯುವತಿಯೊಬ್ಬಳಿಗೆ ಅಪಮಾನಿಸಿದ ಪ್ರಕರಣ ಸಂಬಂಧ ಯಳಂದೂರು ಪಟ್ಟಣ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸದೆ ಬೇಜಾಬ್ದಾರಿ ತನ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ಪ್ರಕರಣ ದಾಖಲಾದರೂ ಅದರ ಸಂಬಂಧ ಕನಿಷ್ಠ 90ದಿನಗಳೊಳಗೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕು. ಗಂಭೀರ ಪ್ರಕರಣವಾಗಿದ್ದರೆ 60ದಿನಗಳೊಳಗೆ ದೋಷಾ ರೋಪಣಾ ಪಟ್ಟಿ ಸಲ್ಲಿಸಬೇಕು ಎಂಬ ನಿಯಮವಿದೆ. ಆದರೆ, ಯುವತಿಯೊಬ್ಬಳು ನೀಡಿದ ದೂರಿನ ಪ್ರಕರಣ 8 ತಿಂಗಳು ಕಳೆದರೂ ಯಳಂದೂರು ಪಟ್ಟಣ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ…
ಸಚಿವರಿಂದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
July 17, 2018ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಕೈಗೊಂಡಿರುವ ವಿವಿಧ ರಸ್ತೆ, ಚರಂಡಿ, ಕಟ್ಟಡ ಕಾಮಗಾರಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಸೋಮವಾರ ವ್ಯಾಪಕವಾಗಿ ಪರಿಶೀಲಿಸಿದರು. ಬೆಳಿಗ್ಗೆಯಿಂದಲೇ ನಗರಾದ್ಯಂತ ಚುರುಕಿನಿಂದ ಸಂಚರಿಸಿ ಕಾಮಗಾರಿಗಳನ್ನು ಸಚಿವರು ವಿಕ್ಷೀಸಿದರು. ಮೊದಲಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಮುಂಭಾಗದಲ್ಲಿರುವ ಶಿಥಿಲ ಗೊಂಡ ಒವರ್ ಹೆಡ್ಟ್ಯಾಂಕ್ನ್ನು ಪರಿ ಶೀಲಿಸಿದರು. ಇದಕ್ಕೆ ಪರ್ಯಾಯವಾಗಿ ಹೊಸ ಟ್ಯಾಂಕ್ ನಿರ್ಮಾಣ ಇಲ್ಲವೆ ದುರಸ್ಥಿ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ತುರ್ತಾಗಿ ನಿರ್ಧಾರ…
ವೇತನ ವಿಳಂಬ: ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು
July 17, 2018ಗುಂಡ್ಲುಪೇಟೆ: ಎರಡು ತಿಂಗಳಿನಿಂದ ವೇತನ ಪಾವತಿಯಾಗದಿರುವುದನ್ನು ವಿರೋಧಿಸಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಸಿದರು. ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕರೆಯ ಮೇರೆಗೆ ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರೂ ತಮ್ಮ ತೋಳುಗಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸಿ ದರು. ಎರಡು ತಿಂಗಳ ವೇತನ ದೊರಕದೆ ಶಿಕ್ಷಕರಿಗೆ ತೀವ್ರ ತೊಂದರೆ ಎದುರಿಸುವಂತಾಗಿದೆ ಎಂದು ಆರೋಪಿಸಿರುವ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದರು. ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲವಾದ್ದರಿಂದ ಜೀವನ ನಿರ್ವಹಣೆಗೆ ಸಾಲಮಾಡಬೇಕಾದ…
ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ
July 17, 2018ಚಾಮರಾಜನಗರ: ಕಬಿನಿ ಹಾಗೂ ಕೆಆರ್ಎಸ್ ಜಲಾಯಶದಿಂದ ಹೆಚ್ಚಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಹಾಗೂ ನದಿ ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮನವಿ ಮಾಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಜಲಾಶಯ ಗಳು ಭರ್ತಿಯಾಗಿವೆ. ಕಬಿನಿ ಜಲಾ ಶಯದಿಂದ 40ಸಾವಿರ ಕ್ಯೂಸೆಕ್ಸ್ ಹಾಗೂ ಕೆಆರ್ಎಸ್ ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ಸೇರಿದಂತೆ 1.10 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರು…