ಚಾಮರಾಜನಗರ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಎದುರಾಗುವ ಯಾವುದೇ ಸಮಸ್ಯೆಯನ್ನು ನಿವಾರಿಸಿ ಪರಿಹಾರ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಕೆ.ಹರೀಶ್ಕುಮಾರ್ ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ ಸಂಭವಿಸಿದ್ದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಕಾಲದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿ ಯಾಗಿದೆ ಎಂದು ತಿಳಿಸಿದ್ದಾರೆ….
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ
June 5, 2018ಚಾಮರಾಜನಗರ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ರಾಮಸಮುದ್ರದ ಸಿಆರ್ ಬಾಲಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿರುವುದು ಇಲಾಖೆ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಹಲ್ಲೆ ಮಾಡಿದ ಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇಂಥಹ ಪ್ರಕರಣಗಳು ಪುನರಾವರ್ತನೆಯಾಗಬಾರದು. ವಿದ್ಯಾರ್ಥಿಗಳ ಮೇಲೆ ದೈಹಿಕ ಅಥವಾ ಮಾನಸಿಕ ಹಿಂಸೆ, ಹಲ್ಲೆ ಮಾಡುವುದು ಮಕ್ಕಳ ರಕ್ಷಣಾ ಹಕ್ಕು…
ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ
June 5, 2018ಚಾಮರಾಜನಗರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಂಕ್ಚರ್ ಆಗಿರುವ ಗಾಡಿಯಾಗಿದೆ. ಈ ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ ಮಾಡುತ್ತಿದೆ ಎಂದು ಮಾಜಿ ಸಂಸದೆ ತೇಜಸ್ವಿನಿಗೌಡ ವ್ಯಂಗ್ಯ ವಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅವಕಾಶವಾದಿಗಳ ಪಿತಾಮಹ ಎಂದು ಟೀಕಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಖುಷಿಯಿಂದ ಹೇಳುತ್ತಿದ್ದರು. ಜತೆಗೆ, ವಯೋವೃದ್ಧರಿಗೆ ಮಾಸಿಕ…
ಅಗತ್ಯ ಔಷಧಿ ಕೊರತೆ: ರೋಗಿಗಳ ಪರದಾಟ
June 4, 2018ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಾರಂಭಿಸಿರುವ ಜನರಿಕ್ ಔಷಧಿ ಮಳಿಗೆಯಲ್ಲಿ ರೋಗಿಗಳಿಗೆ ಅಗತ್ಯವಾದ ಔಷಧಿ ದೊರೆಯುತ್ತಿಲ್ಲ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ದಿನ ನೂರಾರು ರೋಗಿಗಳು ಬರುತ್ತಾರೆ. ಆದರೆ, ಅವರಿಗೆ ಪೂರ್ಣ ಪ್ರಮಾಣದಲ್ಲಿ ಔಷಧಿ ಜನರಿಕ್ ಮಳಿಗೆಯಲ್ಲಿ ಸಿಗುತ್ತಿಲ್ಲ. ನೆಪ ಮಾತ್ರಕ್ಕೆ ಕೆಲವೇ ಔಷಧಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ಇಲ್ಲಿಗೆ ಬರುವ ಮಧುಮೇಹ ಮುಂತಾದ ರೋಗಿಗಳಿಗೆ ಪ್ರತಿ ದಿನವೂ ಮಾತ್ರೆಗಳನ್ನು ಬಳಕೆ ಮಾಡಬೇಕಾಗಿದೆ. ಅಲ್ಲದೆ ಇನ್ಸುಲಿನ್ ಮುಂತಾದ ಪರಿಕರ ಗಳನ್ನು ಹಾಗೂ ಶೀತ, ಕೆಮ್ಮು ಇತ್ಯಾದಿ…
ಜಿಲ್ಲೆಯ ವಿವಿಧೆಡೆ ವಿಶ್ವ ಹಾಲು ದಿನಾಚರಣೆ
June 4, 2018ಚಾಮರಾಜನಗರ: ಜಿಲ್ಲೆಯ ವಿವಿ ಧೆಡೆ ಶುಕ್ರವಾರ ವಿಶ್ವ ಹಾಲು ದಿನಾಚರ ಣೆಯನ್ನು ಶಾಲಾ ಮಕ್ಕಳಿಗೆ ಹಾಲು ವಿತರಣೆ ಮಾಡುವ ಮೂಲಕ ಆಚರಿಸಲಾಯಿತು. ಯಳಂದೂರು ವರದಿ: ತಾಲೂಕಿನ ಕಿನಕ ಹಳ್ಳಿ ಹಾಗೂ ಕಟ್ನವಾಡಿ ಗ್ರಾಮದಲ್ಲಿ ವಿಶ್ವ ಹಾಲು ದಿನಾಚರಣೆ ಅಂಗವಾಗಿ ಹಾಲು ಉತ್ಪಾದಕರ ಸಹಕಾರ ಸಂಘ ದಿಂದ ಕಟ್ನ ವಾಡಿ, ಕಿನಕಹಳ್ಳಿ, ಬಸಾಪುರ, ಯಡ ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಲು ನೀಡುವ ಮೂಲಕ ಆಚರಿಸಿದರು. ಚಾಮರಾಜನಗರ ಹಾಲು ಒಕ್ಕೂಟದ ನಿರ್ದೇಶಕ ಕಿನಕಹಳ್ಳಿ…
ಯಳಂದೂರು ತಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ
June 4, 2018ಯಳಂದೂರು: ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ನ ಹೊನ್ನೂರು ನಿರಂಜನ್ ಹಾಗೂ ಉಪಾ ಧ್ಯಕ್ಷರಾಗಿ ಮದ್ದೂರು ಮಲ್ಲಾಜಮ್ಮ ಅವಿ ರೋಧವಾಗಿ ಆಯ್ಕೆಯಾದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಯಲ್ಲಿ ಶುಕ್ರವಾರ ಅಧ್ಯಕ್ಷ ಮತ್ತು ಉಪಾ ಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಒಟ್ಟು 11 ಸದಸ್ಯರ ಬಲ ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್-6, ಬಿಜೆಪಿ-2, ಬಿಎಸ್ಪಿ-1 ಹಾಗೂ ಪಕ್ಷೇತರ-2 ಸದಸ್ಯರನ್ನು ಹೊಂದಿತ್ತು. ಕಾಂಗ್ರೆಸ್ 6 ಸದ…
ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ಚುನಾವಣಾ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
June 4, 2018ಚಾಮರಾಜನಗರ: ‘ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯವನ್ನು ನಿಷ್ಪಕ್ಷಪಾತ ಹಾಗೂ ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್ ವರ್ಗಳು ಹಾಗೂ ಮತಗಟ್ಟೆ ಅಧಿಕಾರಿ ಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಜೂ. 8ರಂದು ನಡೆಯುವ ಮತದಾನ ದಿನದಂದು ಯಾವುದೇ ಸಮಸ್ಯೆ, ಗೊಂದ ಲಕ್ಕೆ ಆಸ್ಪದವಿಲ್ಲದಂತೆ ಕಾರ್ಯನಿರ್ವ ಹಿಸಲು ಸಿದ್ಧರಾಗಿರಬೇಕು….
ವಿದ್ಯಾರ್ಥಿಗೆ ಕೋಲು ಎಸೆದ ಪ್ರಕರಣ: ಶಿಕ್ಷಕ ಅಮಾನತು
June 4, 2018ಚಾಮರಾಜನಗರ: ನಗರದ ರಾಮಸಮುದ್ರ ಕ್ರಿಸ್ತ ರಾಜ ಬಾಲರಪಟ್ಟಣ ಶಾಲೆಯ ಮುಖ್ಯಶಿಕ್ಷಕ ಜೋಸೆಫ್ ಅವರು ವಿದ್ಯಾರ್ಥಿಗಳತ್ತ ಕೋಲು ಎಸೆದು ವಿದ್ಯಾರ್ಥಿಯೊಬ್ಬನ್ನು ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮುಖ್ಯಶಿಕ್ಷಕ ಜೋಸೆಫ್ ಅವರನ್ನು ಅಮಾನುತುಗೊಳಿಸಿದೆ. ವಿದ್ಯಾರ್ಥಿ ಗಿರಿಮಲ್ಲೇಶ್ ಅವರ ಎಡಗಣ ್ಣಗೆ ಹಾನಿಯಾಗಿದ್ದು, ಈ ಸಂಬಂಧ ವಿದ್ಯಾರ್ಥಿಯ ಪೋಷಕರು ನಗರದ ಪಟ್ಟಣ ಪೊಲೀಸ್ ಠಾಣೆ ಹಾಗೂ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಇದರನ್ವಯ ಶಾಲಾ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಪ್ರಸ್ತುತ…
ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್ಸಿಂಹ ಎಚ್ಚರಿಕೆ
June 3, 2018ಚಾಮರಾಜನಗರ, ಮೇ.2- ರಾಜ್ಯದಲ್ಲಿ ಅಧಿಕಾರದಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಿಂದ ಯಾರಾದ್ರೂ ಬಿಜೆಪಿಯ ಕಾರ್ಯಕರ್ತರನ್ನು ಟಚ್ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಸಂಸದ ಪ್ರತಾಪ್ಸಿಂಹ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿ ಸುವುದಕ್ಕೂ ಮುನ್ನ ತಾವು ಟ್ವೀಟ್ ಮಾಡಿದ್ದನ್ನು ಕುರಿತು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ 23 ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ನಾಳೆ ಇದಕ್ಕೆಲ್ಲಾ ತೆರೆ ಬೀಳಲಿದೆ. ನಾಳೆಯಿಂದ ನಮ್ಮ…
ಚಾ.ನಗರ ನಗರಸಭೆಯಲ್ಲಿ ಬ್ರಹ್ಮಂಡ ಭ್ರಷ್ಟಾಚಾರ
June 3, 2018ಆಡಳಿತಾರೂಢ ಕಾಂಗ್ರೆಸ್ನಿಂದ ಗಂಭೀರ ಆರೋಪ ಚರ್ಚೆಗೆ ಗ್ರಾಸವಾದ ಅಧ್ಯಕ್ಷರು, ಸದಸ್ಯರ ಹೇಳಿಕೆ ಚಾಮರಾಜನಗರ: ಚಾಮರಾಜನಗರ ನಗರಸಭೆಗೆ ಎರಡು ವರ್ಷಗಳಿಂದ ವಿವಿಧ ಯೋಜನೆಯಡಿ ಕೋಟಿಗಟ್ಟಲೆ ಹಣ ಮಂಜೂರಾಗಿದೆ. ಹಾಗೆಯೇ, ಅಷ್ಟೇ ಪ್ರಮಾಣದ ಭ್ರಷ್ಟಾ ಚಾರವೂ ನಡೆದಿದೆ. ಈ ಹಿಂದಿನ ಹಾಗೂ ಈಗಿನ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಕೈಜೋಡಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ.ಹೀಗೆ ಆರೋಪ ಮಾಡಿದವರು ವಿರೋಧ ಪಕ್ಷದ ಜನಪ್ರತಿನಿಧಿಗಳಾಗಲೀ ಅಥವಾ ಮುಖಂಡರಾಗಲೀ ಅಲ್ಲ. ಬದಲಿಗೆ ನಗರಸಭೆಯ ಅಧಿಕಾರ ಚುಕ್ಕಾಣ ಹಿಡಿ ದಿರುವ ಕಾಂಗ್ರೆಸ್ ಮಾಡಿರುವ ಗಂಭೀರ ಆರೋಪ. ಇದನ್ನು ಅಧ್ಯಕ್ಷರಾದ…