ಗುಂಡ್ಲುಪೇಟೆ: ಪಟ್ಟಣದ ಅಬ್ದುಲ್ ನಜೀರ್ ಸಾಬ್ ಜೋಡಿ ರಸ್ತೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನಿಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ಪತ್ರಕರ್ತರಿಂದ ಸನ್ಮಾನ ಸ್ವೀಕ ರಿಸಿ ಅವರು ಮಾತನಾಡಿದರು. ಜೋಡಿ ರಸ್ತೆಯ ಕಾಮಗಾರಿ ಬಹಳ ಮಂದಗತಿಯಲ್ಲಿ ಸಾಗುತ್ತಿದೆ. ಗುದ್ದಲಿ ಪೂಜೆ ಸಮಯದಲ್ಲಿ 3 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದರು. ಆದರೆ, ಕಾಮಗಾರಿ ಪ್ರಾರಂಭ ವಾಗಿ ಆರೇಳು ತಿಂಗಳಾದರೂ ಪೂರ್ಣ ಗೊಂಡಿಲ್ಲ….
ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಸಾವು ಹಲವು ಮನೆಗಳ ಗೋಡೆ ಕುಸಿತ, ಫಸಲು ನಷ್ಟ
May 27, 2018ಚಾಮರಾಜನಗರ: ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ತಾಲೂ ಕಿನ ಬಿಸಲವಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ತಮಿಳುನಾಡಿನ ಸೇಲಂ ಮೂಲದ ಸೀತಮ್ಮ (25) ಮೃತಪಟ್ಟ ಮಹಿಳೆ. ಇವರ ಕುಟುಂಬ ಬಿಸಲವಾಡಿ ಕ್ವಾರೆಯಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಸೇಲಂಗೆ ತೆರಳಿದ್ದ ಅವರು ಗುರುವಾರ ರಾತ್ರಿ ಕ್ವಾರೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಬಿಸಲವಾಡಿ ಗ್ರಾಮದ ಬಳಿ ಮರದಡಿ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು…
ಪಪಂನಲ್ಲಿ ಅಕ್ರಮ ಖಾತೆ; ಲೋಕಕ್ಕೆ ದೂರು
May 27, 2018ಯಳಂದೂರು: ಪಟ್ಟಣ ಪಂಚಾಯಿತಿ ಕಚೇರಿ ಯಲ್ಲಿ ಖಾಸಗಿ ಖಾಲಿ ನಿವೇಶನ ಸೇರಿ ದಂತೆ ಸರ್ಕಾರಿ ಸೈಟುಗಳನ್ನು ಪಟ್ಟಭದ್ರ ವ್ಯಕ್ತಿಗಳಿಗೆ ಅಕ್ರಮ ಖಾತೆ ಮಾಡುತ್ತಿರುವ ಬಗ್ಗೆ ಚಾಮರಾಜನಗರ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಬಿ.ಜಿ.ಕುಮಾರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ತಪ್ಪಿಸ್ಥರ ವಿರುದ್ದ ಕಾನೂನು ಕ್ರಮ ಜರು ಗಿಸಲು ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಶನಿವಾರ ಸಾರ್ವ ಜನಿಕರ ದೂರು ಸ್ವೀಕಾರ ಕಾರ್ಯಕ್ರಮ ದಲ್ಲಿ ಪಟ್ಟಣದ ನಾಗರಿಕರು ಪಟ್ಟಣ ಪಂಚಾ ಯಿತಿ ಕಚೇರಿಯಲ್ಲಿ…
ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾಗಿ ರಮೇಶ್ ಆಯ್ಕೆ
May 26, 2018ಕೊಳ್ಳೇಗಾಲ: ಇಲ್ಲಿನ ನಗರಸಭೆ ನೂತನ ಅಧ್ಯಕ್ಷರಾಗಿ ಭೀಮನಗರದ 3ನೇ ವಾರ್ಡ್ನ ಸದಸ್ಯ ರಮೇಶ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್.ರಮೇಶ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಧಿಕಾರಿ ಫೌಜಿಯಾ ತರನ್ನುಮ್ ಘೋಷಿಸಿದರು. ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್.ರಮೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಾಜಿ ಶಾಸಕ ಎಸ್ ಜಯಣ್ಣ. ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಮರಿಸ್ವಾಮಿ ಸೇರಿದಂತೆ ಹಲವು…
ನಾಲ್ಕು ದಶಕದ ನಂತರ ಇತಿಹಾಸ ಪ್ರಸಿದ್ಧಿ ರಾಜರ ಕಾಲದ ಚಾ.ನಗರದ ದೊಡ್ಡ ಅರಸನಕೊಳ ಬಹುತೇಕ ಭರ್ತಿ ಅಂತರ್ಜಲ ವೃದ್ಧಿ, ನಾಗರಿಕರಲ್ಲಿ ಹರ್ಷ
May 26, 2018ಚಾಮರಾಜನಗರ: ಚಾಮ ರಾಜನಗರದ ಇತಿಹಾಸ ಪ್ರಸಿದ್ಧ ದೊಡ್ಡ ಅರಸನಕೊಳ ಅರ್ಧದಷ್ಟು ಭರ್ತಿ ಆಗಿದೆ. ಇದು ನಗರದ ನಾಗರಿಕರಲ್ಲಿ ಹರ್ಷ ತರಿಸಿದೆ. ನಗರದಲ್ಲಿ ಗುರುವಾರ ರಾತ್ರಿ ಸುಮಾರು ಒಂದು ಗಂಟೆಗಳ ಕಾಲ ಮಿಂಚು-ಗುಡುಗು ಸಹಿತ ಭರ್ಜರಿ ಮಳೆ ಸುರಿಯಿತು. ಹೀಗಾಗಿ ಪೈಪ್ಲೈನ್ ಮೂಲಕ ದೊಡ್ಡ ಅರಸನ ಕೊಳಕ್ಕೆ ಮಳೆ ನೀರು ಹರಿದು ಬಂದಿದೆ. ಮೂಡ್ಲುಪುರ ಬಡಾವಣೆ ಬಳಿಯ ಬಂಜಾರ್ ಸ್ಕೂಲ್ ಬಳಿ ಇರುವ ಅಡ್ಡಹಳ್ಳದಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಕೊಳದ ಬೀದಿಯ ದೊಡ್ಡ ಅರಸನ ಕೊಳಕ್ಕೆ…
ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
May 26, 2018ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದಲ್ಲಿ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆ ನಡೆಸುತ್ತಿರುವ ಶ್ರೀ ಮುರುಘರಾಜೇಂದ್ರಸ್ವಾಮಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರ 1, 2ಎ, 2ಬಿ, 3ಎ, 3ಬಿ ಮತ್ತು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 5ರೊಳಗೆ ಅರ್ಜಿಯನ್ನು ನಿಲಯ ಪಾಲಕರಿಗೆ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪುಸ್ತಕ, ಬಿಎ, ಬಿ.ಎಡ್ ತರಬೇತಿ ಪಡೆದ ಶಿಕ್ಷಕರಿಂದ ಭೋದನೆ ಕೊಡಿಸಲಾಗುವುದು….
ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಬಿಎಸ್ವೈ ವಿರುದ್ಧ ವಾಗ್ದಾಳಿ
May 8, 2018ಚಾಮರಾಜನಗರ: ಜಿಲ್ಲೆಯ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿ ಚುನಾವಣಾ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಮೊದಲಿಗೆ ಹನೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅಲ್ಲಿನ ಮಲೈಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ನಂತರ ಹೆಲಿಕಾಪ್ಟರ್ನಲ್ಲಿ ಕೊಳ್ಳೇಗಾಲಕ್ಕೆ ಆಗಮಿಸಿದರು. ಅಲ್ಲಿನ ನ್ಯಾಷನಲ್ ಮಿಡಲ್ ಸ್ಕೂಲ್…
ಬಿಜೆಪಿ ಆಲಿಬಾಬಾ 40 ಮಂದಿ ಕಳ್ಳರ ಗುಂಪು
May 8, 2018ಗುಂಡ್ಲುಪೇಟೆ: ನಾವು ಆಡಿಕೊಳ್ಳುತ್ತಿರುವುದನ್ನು ಅರಿತ ಪ್ರಧಾನಿ ನರೇಂದ್ರಮೋದಿ ಮಾಜಿ ಸಿಎಂ ಯಡಿಯೂರಪ್ಪ ಉರುಫ್ ಜೈಲೂರಪ್ಪ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುವುದನ್ನೇ ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಪಟ್ಟಣದ ನೆಹರು ಪಾರ್ಕ್ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಲಿಬಾಬಾ ಮತ್ತು ನಲವತ್ತು ಮಂದಿ ಕಳ್ಳರ ಗುಂಪು ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದೆ. ಇಂತಹ ಕಳ್ಳರ ಕೈಗೆ ರಾಜ್ಯವನ್ನು ಕೊಡಬೇಡಿ. ಉತ್ತಮವಾದ ಆಡಳಿತವನ್ನು ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತವನ್ನು ನೀಡಿ ಎಂದು ಮತದಾರರಲ್ಲಿ…
ಎಸ್ಎಸ್ಎಲ್ಸಿ: ಜಿಲ್ಲೆಗೆ 24ನೇ ಸ್ಥಾನ
May 8, 2018ಚಾಮರಾಜನಗರ: ಮಾರ್ಚ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆ ಶೇ.74.47 ಫಲಿತಾಂಶ ಪಡೆದು ರಾಜ್ಯದಲ್ಲಿ 24ನೇ ಸ್ಥಾನ ಪಡೆದಿದೆ. ಕಳೆದ ವರ್ಷ(2017) ಶೇ.75.66 ಫಲಿತಾಂಶ ಪಡೆದು ರಾಜ್ಯದಲ್ಲಿ 12ನೇ ಸ್ಥಾನ ಪಡೆದಿತ್ತು. ಈ ಬಾರಿ 24ನೇ ಸ್ಥಾನ ಪಡೆಯುವ ಮೂಲಕ 12 ಸ್ಥಾನಗಳ ಕುಸಿತ ಕಂಡಿದೆ. ಇದು ಜಿಲ್ಲೆಯ ಶೈಕ್ಷಣ ಕ ಪ್ರಗತಿಗೆ ತೀವ್ರ ಹಿನ್ನಡೆ ಆದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 9898 ವಿದ್ಯಾರ್ಥಿಗಳು ಪರೀಕ್ಷೆ ಬರೆದಿ ದ್ದರು. ಇದರಲ್ಲಿ 7370 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ…
ಸಿಎಂ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರತಿಭಟನೆ
May 8, 2018ಕೊಳ್ಳೇಗಾಲ: ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಪತ್ರಕರ್ತರಿಗೆ ಸ್ಥಳಾವಕಾಶ ಕಲ್ಪಿಸದ ಕಾರಣ ಪತ್ರಕರ್ತರು ಸುಮಾರು ಅರ್ಧ ಗಂಟೆಗಳ ಕಾಲ ಪ್ರತಿಭಟಿಸಿ ಕಾರ್ಯಕ್ರಮದಿಂದ ಹೊರ ನಡೆದ ಘಟನೆ ಜರುಗಿತು. ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಸ್ಥಳಾವಕಾಶ ಕಲ್ಪಿಸಿ ಎಂದು ಬ್ಲಾಕ್ ಅಧ್ಯಕ್ಷ ತೋಟೇಶ್ ಅವರಲ್ಲಿ ಕೆಲ ಪತ್ರಕರ್ತರು ಮನವಿ ಮಾಡಿದರೂ ಸಹಾ ಉದ್ದಟತನ ವರ್ತನೆ ತೋರಿದ ಹಿನ್ನೆಲೆ ವೇದಿಕೆಯ ಹಿಂಭಾಗದ ಗುರುಭವನದಲ್ಲಿ ನಿಂತು ಪತ್ರಕರ್ತರು ಪ್ರತಿಭಟಿಸಿದರು. ನಂತರ ಪತ್ರಕರ್ತರು ಸಂಸದ ಆರ್. ಧ್ರುವನಾರಾಯಣ್ ಅವರಿಗೆ ವಿಚಾರ ಮುಟ್ಟಿಸುತ್ತಿದ್ದಂತೆ ಅವರು…